ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರ್ ನ ಮೇಲೆ ಸುಮಾರು ನೂರು ಜನರಿದ್ದ ಗುಂಪೊಂದು ಏಕಾಏಕಿ ದಾಳಿ ಮಾಡಿದೆ. ಶುಕ್ರವಾರ ನಡೆದ ಘಟನೆ ವೇಳೆ ದೊಣ್ಣೆ ಇತರೆ ಮಾರಕಾಸ್ತ್ರಗಳ ಹಿಡಿದು ದಾಳಿ ನಡೆಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.
ಪಶ್ಚಿಮ ದೆಹಲಿಯ ನರೇಲಾ ಎಂಬಲ್ಲಿ ಈ ಘಟನೆ ನಡೆದಿದೆ.ಗುಂಪು ದೆಹಲಿ ಮುಖ್ಯಮಂತ್ರಿಗಳ ಕಾರನ್ನು ತಡೆದು ಕಾರಿಗೆ ದೊಣ್ಣೆಯಿಂದ ಹೊಡೆದು ಹಾನಿಗೊಳಿಸಿದೆ.
ದೆಹಲಿ ಹೊರವಲಯದ ಕಾಲೋನಿಯೊಂದರಲ್ಲಿ ಅಭಿವೃದ್ದಿ ಕಾಮಗಾರಿ ಉದ್ಘಾಟನೆಗೆ ಕೇಜ್ರಿವಾಲ್ ಆಗಮಿಸಿದ್ದರು.ದಾಳಿ ಮಾಡಿದವರು ಬಿಜೆಪಿ ಕಾರ್ಯಕರ್ತರೆಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಘಟನೆಯಲ್ಲಿ ಸಿಎಂ ಕಾರಿನ ಮಿರರ್ ಹಾನಿಗೊಳಗಾಗಿದೆ.