ಗಂಗಾಧರ್ 
ದೇಶ

ಬಿಇಎಲ್ ನಲ್ಲಿ ಕೆಲ್ಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ, 1 ಕೋಟಿ ರು. ವಂಚನೆ

ವ್ಯಕ್ತಿಯೊಬ್ಬ ಉದ್ಯೋಗ ಆಕಾಂಕ್ಷಿಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ ಹಾಕಿದ್ದಾರೆ.

ಬೆಂಗಳೂರು: ವ್ಯಕ್ತಿಯೊಬ್ಬ ಉದ್ಯೋಗ ಆಕಾಂಕ್ಷಿಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 76 ಮಂದಿಗೆ ಪಂಗನಾಮ ಹಾಕಿದ್ದಾರೆ.
ನಯಾಜ್ ಪಾಷಾ ಎಂಬ ವ್ಯಕ್ತಿ ತಾನು ಬಿಇಎಲ್ ಉದ್ಯೋಗಿಯಾಗಿದ್ದು, ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ತನಗೆ ಗೊತ್ತು. 5 ಲಕ್ಷ ರುಪಾಯಿ ಕೊಟ್ಟರೆ ಕೆಲಸ ಕೊಡಿಸುತ್ತೇನೆ. ಮೊದಲು ಲಿಸ್ಟ್ ನಲ್ಲಿ ನಿಮ್ಮ ಹೆಸರು ಅನೌನ್ಸ್ ಆದಾಗ 1.50 ಲಕ್ಷ ಕೊಡಿ. ನೇಮಕಾತಿ ಬಳಿಕ ಬಾಕಿ ಹಣ ನೀಡುವಂತೆ ಹೇಳಿದ್ದಾನೆ. ಇತ್ತ ಕೆಲಸ ಸಿಗುತ್ತದೆ ಎಂಬ ಆಸೆಯಿಂದ ಜನ ಹಣ ಕೊಟ್ಟಿದ್ದಾರೆ. ಹಣ ಸಿಕ್ಕಿದ ಕೂಡಲೇ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.
ವಾಟ್ಸಪ್ ಮೂಲಕ ಬಿಇಎಲ್ ಫ್ಯಾಕ್ಟರಿಯ ಲೇಟರ್ ಹೇಡ್‍ನಲ್ಲಿ ನಕಲಿ ಲಿಸ್ಟ್ ತೋರಿಸಿ 2018 ನವಂಬರ್ 8ಕ್ಕೆ ಸಂದರ್ಶನಕ್ಕೆ ಅಪಾಯಿಂಟ್ ಮೆಂಟ್ ಸಿಕ್ಕಿದೆ ಎಂದು ಹಣ ಪಡೆದಿದ್ದಾನೆ. ಬಳಿಕ ನಯಾಜ್ ಮಹಿಳೆಯೊಬ್ಬಳಿಂದ ಕರೆ ಮಾಡಿಸಿ ಸಂದರ್ಶನದ ದಿನಾಂಕವನ್ನು 2019 ಜನವರಿ 29ಕ್ಕೆ ಮುಂದೂಡಲಾಗಿದೆ ಎಂದು ಸುಳ್ಳು ಹೇಳಿಸಿದ್ದನು. ನಂತರ ಜನವರಿ 28ಕ್ಕೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ಹಣ ಕಳೆದುಕೊಂಡ ಗಂಗಾಧರ್ ಹೇಳಿದ್ದಾರೆ.
ಈ ಬಗ್ಗೆ ಅನುಮಾನ ಬಂದು ಬಿಇಎಲ್ ಫ್ಯಾಕ್ಟರಿ ಎಂಡಿ ಅವರನ್ನ ಸಂಪರ್ಕಿಸಿದಾಗ ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ಇನ್ನೂ ನಯಾಜ್ ಇದುವರೆಗೂ 76 ಜನರಿಂದ ಸುಮಾರು 1 ಕೋಟಿ ರುಪಾಯಿ ಹಣ ಪೀಕಿದ್ದಾನೆ.
ಈ ಸಂಬಂಧ ವಂಚನೆಗೊಳಗಾದವರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT