ಕೊಲಂಬೋ: ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಮಹಿಂದಾ ರಾಜಪಕ್ಸ ಶುಕ್ರವಾರ ಸಂಜೆ ಭಾರತಕ್ಕೆ ಆಗಮಿಸಲಿದ್ದಾರೆ.ಈ ಸಂದರ್ಭದಲ್ಲಿ ಅವರು ಭವಿಷ್ಯದಲ್ಲಿ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳ ಸುಧಾರಣೆಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಅವರ ಕಛೇರಿ ಮೂಲಗಳು ಹೇಳಿದೆ.
ಕಳೆದ ತಿಂಗಳು ಪ್ರತಿಪಕ್ಷ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ರಾಜಪಕ್ಸಅವರ ಮೊದಲ ವಿದೇಶ ಪ್ರವಾಸವಾಗಿದೆ.
ಆಂಗ್ಲ ಪತ್ರಿಕೆ "ದಿ ಹಿಂದೂ" ಬೆಂಗಳೂರಿನಲ್ಲಿ ಫೆಬ್ರವರಿ9-10ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ರಾಜಪಕ್ಸ ಹಾಜರಾಗಲಿದ್ದಾರೆ.ಈ ಕಾರ್ಯಕ್ರಮದ ಉದ್ಘಾಟನೆಗೆ ಅವರನ್ನು ಆಹ್ವಾನಿಸಲಾಗಿದ್ದು ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಅಲ್ಲಿ ಅವರು ಭಾರತ ಮತ್ತು ಶ್ರೀಲಂಕಾ ನಡುವಿನ ಭವಿಷ್ಯದ ಸಂಬಂಧಗಳ ಕುರಿತು ಮಾತನಾಡುವ ಸಾಧ್ಯತೆ ಇದೆ.
ಇದೇ ಕಾರ್ಯಕ್ರಮದ ಎರಡನೇ ದಿನ ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ.
ಈ ವೇಳೆ ರಾಜಪಕ್ಸ ದೇಶದ ಗಣ್ಯರೊಡನೆ ಭೇಟಿ ಮಾಡಲಿದ್ದಾರೆ. ಇದು ಕಳೆದ ಆರು ತಿಂಗಳಲ್ಲಿ ಅವರ ಎರಡನೇ ಭಾರತ ಭೇಟಿಯಾಗಿದೆ.ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಅವರು ದೆಹಲಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಮತ್ತೆ ಅಕ್ಟೋಬರ್ ವೇಳೆಗೆ ದ್ವೀಪರಾಷ್ಟ್ರದಲ್ಲಿ ಉಂಟಾದ ರಾಜಕೀಯ ವಿಪ್ಲವದ ಕಾರಣ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos