ಮುಂಬೈ: ಸ್ವಾತಂತ್ರ ಸೇನಾನಿ ವೀರಸಾವರ್ಕರ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನವದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಭಾಷಣದ ವೇಳೆ ವೀರಸಾವರ್ಕರ್ ಒಬ್ಬ ಹೇಡಿ ಎಂದು ಜರಿದಿದ್ದರು.
ಸಾವರ್ಕರ್ ಅವರನ್ನು ಒಬ್ಬ ಹೇಡಿ ಎಂದು ಅವಹೇಳನಾಕಾರಿಯಾಗಿ ಕರೆಯುವ ಮೂಲಕ ರಾಹುಲ್ ಗಾಂಧಿ, ಖಾಸಗಿ ವ್ಯಕ್ತಿಗಳ ಭಾವನೆಗಳಿಗೆ ದಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.