ಯೋಗಗುರು ಬಾಬಾ ರಾಮ್ ದೇವ್ 
ದೇಶ

ರಾಮ ದೇವರು ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಪೂರ್ವಜರು; ಬಾಬಾ ರಾಮದೇವ್

ರಾಮದೇವರು ಹಿಂದೂಗಳಿಗೆ ಮಾತ್ರವಲ್ಲದೆ ಮುಸಲ್ಮಾನರಿಗೆ ಸಹ ಪೂರ್ವಜರಾಗಿದ್ದರು...

ನಡಿಯಾಡ್(ಗುಜರಾತ್): ರಾಮದೇವರು ಹಿಂದೂಗಳಿಗೆ ಮಾತ್ರವಲ್ಲದೆ ಮುಸಲ್ಮಾನರಿಗೆ ಸಹ ಪೂರ್ವಜರಾಗಿದ್ದರು ಎಂದು ಯೋಗ ಗುರು ರಾಮದೇವ್ ಹೇಳಿದ್ದಾರೆ.

ನಿನ್ನೆ ಗುಜರಾತ್ ನ ನಡಿಯಾಡ್ ನಲ್ಲಿ ಯೋಗ ಕಾರ್ಯಕ್ರಮವೊಂದರ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಮ ಮಂದಿರ ಖಂಡಿತವಾಗಿಯೂ ನಿರ್ಮಾಣವಾಗಲೇಬೇಕು. ಅಯೋಧ್ಯೆಯಲ್ಲಿ ರಾಮ ಮಂದಿರವಾಗದಿದ್ದರೆ ಮತ್ತೆಲ್ಲಿ ಮೆಕ್ಕಾ ಮದೀನ ಅಥವಾ ವ್ಯಾಟಿಕನ್ ನಗರದಲ್ಲಿ ಆಗುವುದೇ? ರಾಮ ಹುಟ್ಟಿದ ಸ್ಥಳ ಅಯೋಧ್ಯೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನು ಕೇವಲ ಹಿಂದೂಗಳಿಗೆ ಮಾತ್ರವಲ್ಲ ಮುಸ್ಲಿಂರಿಗೆ ಸಹ ಪೂರ್ವಜನಾಗಿದ್ದ. ಇದರಲ್ಲಿ ರಾಜಕೀಯದ ಪ್ರಶ್ನೆ ಬರುವುದಿಲ್ಲ ಅಥವಾ ವೋಟ್ ಬ್ಯಾಂಕಿಗಾಗಿ ಅಲ್ಲ ಎಂದು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಅಯೋಧ್ಯೆಗೆ ಹಿಂದೂಗಳು ಪಾದಯಾತ್ರೆ ಬೆಳೆಸಿದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದು ಕೆಲ ದಿನಗಳ ಹಿಂದೆ ರಾಮದೇವ್ ಹೇಳಿಕೆ ನೀಡಿದ್ದರು.

ನಾವು ಸಂವಿಧಾನವನ್ನು ಗೌರವಿಸುತ್ತೇವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಸಂಸತ್ತು ಅಥವಾ ಸುಪ್ರೀಂ ಕೋರ್ಟ್ ಏನಾದರೊಂದು ದಾರಿ ಕಂಡುಕೊಳ್ಳಬೇಕು. ಅಯೋಧ್ಯೆಗೆ ಪಾದಯಾತ್ರೆ ಹೋಗುವ ಅಗತ್ಯವಿದ್ದರೆ ಹಿಂದೂಗಳು ಸಾಮೂಹಿಕವಾಗಿ ಪಾದಯಾತ್ರೆ ಬೆಳೆಸಿ ರಾಮಮಂದಿರ ನಿರ್ಮಾಣ ಮಾಡಬೇಕು.

ಹಾಗಾದರೆ ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು.
ಕಳೆದ ಎಂಟು ವರ್ಷಗಳಿಂದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT