ದೇಶ

ಮುಂದಿನ ವಾರ ದೆಹಲಿಯಲ್ಲಿ ಕೇಜ್ರಿವಾಲ್, ನಾಯ್ಡು ಮಮತಾ ಸಮಾವೇಶ!

Srinivas Rao BV
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಫೆ.13 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಸರ್ವಾಧಿಕಾರ ತೆಗೆಯಿರಿ ಪ್ರಜಾಪ್ರಭುತ್ವ ಉಳಿಸಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. 
ಬಿಜೆಪಿಯೇತರ ಮೈತ್ರಿಕೂಟ ಪಕ್ಷಗಳ ನಾಯಕರು ಸಹ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. "ಪ್ರಧಾನಿ ಮೋದಿ- ಅಮಿತ್ ಶಾ, ದೇಶದ ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ.  ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಿಸಬೇಕಾಗಿರುವುದು ಪ್ರತಿಯೊಬ್ಬ ದೇಶಭಕ್ತನ ಕರ್ತವ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. 
SCROLL FOR NEXT