ನವದೆಹಲಿ: ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಚಂದ್ರಬಾಬು ನಾಯ್ಡು ಅವರು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆ 2014ರ ಅನ್ವಯ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಚಂದ್ರಬಾಬು ನಾಯ್ಡು ನೇತೃತ್ಯದಲ್ಲಿ ದೆಹಲಿಯಲ್ಲಿ ಇಂದು ಟಿಡಿಪಿ ಪಕ್ಷ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.
ಸತ್ಯಾಗ್ರಹಕ್ಕೂ ಮೊದಲು ಸಿಎಂ ನಾಯ್ಡು ಮಹಾತ್ಮ ಗಾಂಧಿ ಸಮಾಧಿ ರಾಜ್ ಘಾಟ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು. ಬಳಿಕ ಆಂಧ್ರ ಪ್ರದೇಶ ಭವನಕ್ಕೆ ತೆರಳಿ ತಮ್ಮ ಧರ್ಮ ಪೋರಾಟ ದೀಕ್ಷಾ ಸತ್ಯಾಗ್ರಹವನ್ನು ಆರಂಭಿಸಿದರು. ಇನ್ನು ನಾಯ್ಡು ಅವರ ಪ್ರತಿಭಟನೆಗೆ ಇಂದು ವಿಪಕ್ಷಗಳ ಪ್ರಮುಖ ಮುಖಂಡರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಇಂದಿನ ಸತ್ಯಾಗ್ರಹದಲ್ಲಿ ಆಂಧ್ರ ಪ್ರದೇಶದ ಸಚಿವರು, ಟಿಡಿಪಿ ಶಾಸಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಅಂತೆಯೇ ಇಂದಿನ ಧರಣಿ ಬಳಿಕ ನಾಳೆ ರಾಷ್ಟ್ರಪತಿ ಕೋವಿಂದ್ ರನ್ನು ಭೇಟಿ ಮಾಡಲಿರುವ ಸಿಎಂ ನಾಯ್ಡು ಮನವಿ ಪತ್ರ ಸಲ್ಲಿಕೆ ಮಾಡಲಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos