ಸತ್ಯಾಗ್ರಹದಲ್ಲಿ ರಾಹುಲ್ ಭಾಗಿ 
ದೇಶ

ಆಂಧ್ರ ಪ್ರದೇಶದೊಂದಿಗೆ ನಾವಿದ್ದೇವೆ, ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ?: ರಾಹುಲ್ ಗಾಂಧಿ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಆಂಧ್ರ ಪ್ರದೇಶ ಜನರೊಂದಿಗೆ ನಾವಿದ್ದೇವೆ. ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ ಎಂದು...

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಆಂಧ್ರ ಪ್ರದೇಶ ಜನಮರೊಂದಿಗೆ ನಾವಿದ್ದೇವೆ. ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ನಡೆಯುಸುತ್ತಿರುವ ಧರ್ಮ ಹೋರಾಟ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ವಿಭಜಿತ ಆಂಧ್ರ ಪ್ರದೇಶಕ್ಕೆ ಕಾಂಗ್ರೆಸ್ ಮತ್ತು ಯುಪಿಎ ಮೈತ್ರಿಕೂಟ ಸಂಪೂರ್ಣ ಬೆಂಬಲ ನೀಡುತ್ತದೆ. ಆಂಧ್ರ ಪ್ರದೇಶ ಜನರೊಂದಿಗೆ ನಾವಿದ್ದು, ಅವರ ಹೋರಾಟಕ್ಕೆ ನಾವೂ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಜನರ ಕಷ್ಟಗಳಿಗೆ ಸ್ಪಂಧಿಸಿದ ಇವರು ಎಂತಹ ಪ್ರಧಾನಿ.. ಚುನಾವಣೆಗೂ ಮೊದಲು ತಾವೇ ನೀಡಿದ್ದ ಭರವಸೆಗಳನ್ನು ಚುನಾವಣೆ ಬಳಿಕ ಮರೆತಿದ್ದಾರೆ. ಸುಳ್ಳು ಆಮಿಷಗಳನ್ನು ನೀಡಿ ಮೋಸ ಮಾಡಿದ್ದಾರೆ. ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಎನ್ ಡಿಎ ಸರ್ಕಾರದ ಮೇಲೆ ಜನತೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT