ಸತ್ಯಾಗ್ರಹದಲ್ಲಿ ರಾಹುಲ್ ಭಾಗಿ 
ದೇಶ

ಆಂಧ್ರ ಪ್ರದೇಶದೊಂದಿಗೆ ನಾವಿದ್ದೇವೆ, ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ?: ರಾಹುಲ್ ಗಾಂಧಿ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಆಂಧ್ರ ಪ್ರದೇಶ ಜನರೊಂದಿಗೆ ನಾವಿದ್ದೇವೆ. ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ ಎಂದು...

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಆಂಧ್ರ ಪ್ರದೇಶ ಜನಮರೊಂದಿಗೆ ನಾವಿದ್ದೇವೆ. ಜನರ ಕಷ್ಟ ನೋಡದ ಇವರು ಎಂತಹ ಪ್ರಧಾನಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ನಡೆಯುಸುತ್ತಿರುವ ಧರ್ಮ ಹೋರಾಟ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ವಿಭಜಿತ ಆಂಧ್ರ ಪ್ರದೇಶಕ್ಕೆ ಕಾಂಗ್ರೆಸ್ ಮತ್ತು ಯುಪಿಎ ಮೈತ್ರಿಕೂಟ ಸಂಪೂರ್ಣ ಬೆಂಬಲ ನೀಡುತ್ತದೆ. ಆಂಧ್ರ ಪ್ರದೇಶ ಜನರೊಂದಿಗೆ ನಾವಿದ್ದು, ಅವರ ಹೋರಾಟಕ್ಕೆ ನಾವೂ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಜನರ ಕಷ್ಟಗಳಿಗೆ ಸ್ಪಂಧಿಸಿದ ಇವರು ಎಂತಹ ಪ್ರಧಾನಿ.. ಚುನಾವಣೆಗೂ ಮೊದಲು ತಾವೇ ನೀಡಿದ್ದ ಭರವಸೆಗಳನ್ನು ಚುನಾವಣೆ ಬಳಿಕ ಮರೆತಿದ್ದಾರೆ. ಸುಳ್ಳು ಆಮಿಷಗಳನ್ನು ನೀಡಿ ಮೋಸ ಮಾಡಿದ್ದಾರೆ. ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಎನ್ ಡಿಎ ಸರ್ಕಾರದ ಮೇಲೆ ಜನತೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT