ಪಿಯೂಷ್ ಗೋಯೆಲ್ 
ದೇಶ

ಕೇಂದ್ರ ಮಧ್ಯಂತರ ಬಜೆಟ್ ಲೋಕಸಭೆಯಲ್ಲಿ ಅಂಗೀಕಾರ: ಪ್ರತಿಯೊಬ್ಬ ನಾಗರಿಕರಿಗೂ ಪ್ರಯೋಜನ- ಗೋಯೆಲ್

ಇತ್ತೀಚಿಗೆ ಮಂಡಿಸಲಾದ 2019-20ರ ಕೇಂದ್ರ ಬಜೆಟ್ ದೇಶದ ಸರ್ವಾಂಗೀಣ ಪ್ರಗತಿಯ ಗುರಿ ಹೊಂದಿದ್ದು, ಪ್ರತಿಯೊಬ್ಬ ನಾಗರಿಕರಿಗೂ ಇದರಿಂದ ಪ್ರಯೋಜನ ಆಗಲಿದೆ ಎಂದು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.

ನವದೆಹಲಿ: ಇತ್ತೀಚಿಗೆ ಮಂಡಿಸಲಾದ 2019-20ರ ಕೇಂದ್ರ ಬಜೆಟ್  ದೇಶದ ಸರ್ವಾಂಗೀಣ ಪ್ರಗತಿಯ ಗುರಿ ಹೊಂದಿದ್ದು, ಪ್ರತಿಯೊಬ್ಬ ನಾಗರಿಕರಿಗೂ ಇದರಿಂದ ಪ್ರಯೋಜನ ಆಗಲಿದೆ ಎಂದು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್  ತಿಳಿಸಿದ್ದಾರೆ.

ಕಾಂಗ್ರೆಸ್ ಹಾಗೂ ಎಡಪಕ್ಷಗಳ  ಸಭಾತ್ಯಾಗದ ನಡುವೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬಜೆಟ್  ಮೇಲಿನ ಚರ್ಚೆಯಲ್ಲಿ ಮಾತನಾಡಿದ ಗೋಯೆಲ್,   ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಬಜೆಟ್ ನಿಂದ ಸೂಕ್ತ ಪ್ರಯೋಜನ ದೊರೆಯಲಿದೆ ಎಂದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ  ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ 12 ಕೋಟಿ  ರೈತರು ಪ್ರತಿವರ್ಷ 6 ಸಾವಿರ ರೂ. ಆರ್ಥಿಕ ನೆರವು ಪಡೆಯಲಿದ್ದಾರೆ. ಈ ಹಣ ಮೂರು ಕಂತಿನಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಲಿದೆ ಎಂದರು.

ಬಜೆಟ್ ನ ಒಟ್ಟಾರೇ ವೆಚ್ಚ 27. 84 ಲಕ್ಷ ಕೋಟಿಯಾಗಿದ್ದು, ಕಳೆದ ಸಾಲಿಗಿಂತ ಶೇ, 13 ರಷ್ಟು ಹೆಚ್ಚಾಗಿದೆ. ರಕ್ಷಣಾ ಕ್ಷೇತ್ರದ ವೆಚ್ಚ ಕಳೆದ ಸಾಲಿನಲ್ಲಿದ್ದ 2.85 ಲಕ್ಷ ಕೋಟಿಯಿಂದ 3. 05 ಲಕ್ಷ ಕೋಟಿಗೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

 5 ಲಕ್ಷ ವಾರ್ಷಿಕ ಆದಾಯ ಹೊಂದಿರುವ  ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಸಂಪೂರ್ಣ ತೆರಿಗೆ ಮೊತ್ತವನ್ನು ಮರು ಪಡೆಯಲಿದ್ದಾರೆ ವಾರ್ಷಿಕವಾಗಿ ಆರೂವರೆ ಲಕ್ಷ ಆದಾಯ ಪಡೆಯುವವರಿಗೂ ಕೂಡಾ ಆದಾಯ ತೆರಿಗೆ ಉಳಿತಾಯವಾಗಲಿದೆ ಎಂದು ಪಿಯೂಷ್ ಗೋಯೆಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT