ಶಾಸಕ ಜಿಗ್ನೇಶ್ ಮೇವಾನಿ 
ದೇಶ

ಶಾಸಕ ಮೇವಾನಿ ಅತಿಥಿಯಾಗಿದ್ದ ಕಾರ್ಯಕ್ರಮ ರದ್ದು, ಪ್ರಿನ್ಸಿಪಾಲ್ ರಾಜೀನಾಮೆ

ದಲಿತ ನಾಯಕ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯ ಅತಿಥಿಯಾಗಿದ್ದ, ಅವರು ಓದಿದ್ದ ಕಾಲೇಜ್ ನ ವಾರ್ಷಿಕೋತ್ಸವ...

ಅಹಮದಾಬಾದ್: ದಲಿತ ನಾಯಕ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯ ಅತಿಥಿಯಾಗಿದ್ದ, ಅವರು ಓದಿದ್ದ ಕಾಲೇಜ್ ನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಾಲೇಜ್ ಆಡಳಿತ ಮಂಡಳಿ ಸೋಮವಾರ ದಿಢೀರ್ ರದ್ದುಗೊಳಿಸಿದೆ. 
ಕಾರ್ಯಕ್ರಮ ರದ್ಜುಗೊಳಿಸಿದ ಎಚ್ ಕೆ ಆರ್ಟ್ಸ್ ಕಾಲೇಜ್ ನ ಬ್ರಹ್ಮಾಚಾರಿ ವದಿ ಟ್ರಸ್ಚ್ ನಿರ್ಧಾರ ಖಂಡಿಸಿ ಕಾಲೇಜ್ ಪ್ರಾಚಾರ್ಯ ಹೇಮಂತ್ ಶಾಹ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಲೇಜ್ ಆಡಳಿತ ಮಂಡಳಿ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ರಾಜಿ ಮಾಡಿಕೊಂಡಿದೆ ಎಂದು ಪ್ರಾಚಾರ್ಯರು ದೂರಿದ್ದಾರೆ.
ಜಿಗ್ನೇಶ್ ಮೇವಾನಿ ಅವರು ಈ ಕಾಲೇಜ್ ನ ಹಳೆ ವಿದ್ಯಾರ್ಥಿಯಾಗಿದ್ದು, ಕಾಲೇಜ್ ನ ಆಡಿಟೋರಿಯಂ ನಲ್ಲಿ ನಡೆಯಬೇಕಿದ್ದ ವಾರ್ಷಿಕೋತ್ಸವವನ್ನು ರದ್ದುಗೊಳಿಸಲಾಗಿದೆ.
ಅಹಮದಾಬಾದ್ ನ ಎಚ್ ಕೆ ಆರ್ಟ್ಸ್ ಕಾಲೇಜ್ ಟ್ರಸ್ಟ್ ಗೆ ಬಿಜೆಪಿ ಗೂಂಡಾಗಳು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವವನ್ನು ರದ್ದುಗೊಳಿಸಲಾಗಿದೆ. ಆ ಕಾರ್ಯಕ್ರಮಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ನನ್ನ ಬೆಂಬಲಕ್ಕೆ ನಿಂತ ಪ್ರಿನ್ಸಿಪಾಲ್ ಹೇಮಂತ್ ಶಾಹ್ ಅವರಿಗೆ ವಂದಿಸುತ್ತೇನೆ ಎಂದು ಮೇವಾನಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT