ಜಮ್ಮುವಿನಲ್ಲಿ ಸಿಲುಕಿದ್ದ 700 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಿದ ವಾಯುಪಡೆ! 
ದೇಶ

ಜಮ್ಮುವಿನಲ್ಲಿ ಸಿಲುಕಿದ್ದ 700 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಿದ ವಾಯುಪಡೆ!

ಜಮ್ಮುವಿನಲ್ಲಿ ಸಿಲುಕಿಕೊಂಡಿದ್ದ 700 ಪ್ರಯಾಣಿಕರನ್ನು ಭಾರತೀಯ ವಾಯುಪಡೆ ಶ್ರೀನಗರಕ್ಕೆ ಏರ್ ಲಿಫ್ಟ್ ಮಾಡಿದೆ.

ಜಮ್ಮು: ಜಮ್ಮುವಿನಲ್ಲಿ ಸಿಲುಕಿಕೊಂಡಿದ್ದ 700 ಪ್ರಯಾಣಿಕರನ್ನು ಭಾರತೀಯ ವಾಯುಪಡೆ ಶ್ರೀನಗರಕ್ಕೆ ಏರ್ ಲಿಫ್ಟ್ ಮಾಡಿದೆ.
ಕಳೆದ ನಾಲ್ಕು ದಿನಗಳಿಂದ ಏರ್ ಲಿಫ್ಟ್ ಮೂಲಕ ಬೇರೆಡೆಗೆ ಸ್ಥಳಾಂತರಿಸಲಾದ ಪ್ರಯಾಣಿಕರ ಸಂಖ್ಯೆ ಒಟ್ಟು 1,432 ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ. ಇದೇ ಮೊದಲ ಬಾರಿಗೆ c-17 ಏರ್ ಕ್ರಾಫ್ಟ್ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದು 707 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಿದೆ. 
ದೇಶದ ಇತರ ಭಾಗಗಳಿಗೆ ಸಂಪರ್ಕ ಕೊಂಡಿಯಾಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತವಾಗುತ್ತಿರುವುದರಿಂದ ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಸಾವಿರಾರು ಜನರು ಜಮ್ಮುವಿನಲ್ಲೇ ಪ್ರಯಾಣಿಸಲು ಸಾಧ್ಯವಾಗದೇ ಸಿಲುಕಿದ್ದರು. ಜಿಲ್ಲಾಡಳಿತ ಹಾಗೂ ಭಾರತೀಯ ವಾಯುಪಡೆ, ರಕ್ಷಣಾ ಕಾರ್ಯಾಚರಣೆಯನ್ನು ಜಂಟಿಯಾಗಿ ಕೈಗೊಂಡಿದ್ದು, ಮೊದಲ ಹಂತದಲ್ಲಿ 301, ಎರಡನೇ ಹಂತದಲ್ಲಿ ವಿದ್ಯಾರ್ಥಿಗಳೂ ಸೇರಿದಂತೆ 406 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ. ಜಮ್ಮು ಮೂಲದ ಟೈಗರ್ ವಿಭಾಗದಿಂದ ಜನರಿಗೆ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT