ಆಂಧ್ರ ಸಿಎಂ ನಾಯ್ಡು ಧರಣಿ 
ದೇಶ

ಪ್ರಧಾನಿ ಮೋದಿ ರಾಜಧರ್ಮ ಪಾಲಿಸುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ: ಆಂಧ್ರ ಸಿಎಂ ನಾಯ್ಡು

ಪ್ರಧಾನಿ ನರೇಂದ್ರ ಮೋದಿ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಜಧರ್ಮ ಪಾಲನೆ ಮಾಡುತ್ತಿಲ್ಲ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಜಧರ್ಮ ಪಾಲನೆ ಮಾಡುತ್ತಿಲ್ಲ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ದೆಹಲಿಯಲ್ಲಿ ಟಿಡಿಪಿ ಪಕ್ಷ ಆಯೋಜಿಸಿರುವ 'ಧರ್ಮ ಹೋರಾಟ ದೀಕ್ಷಾ' ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಚಂದ್ರಬಾಬು ನಾಯ್ಡು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 
2014 ರಲ್ಲಿ ಆಂಧ್ರಪ್ರದೇಶವು ವಿಭಜನೆಯಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶವೆಂಬ ಎರಡು ರಾಜ್ಯಗಳು ಸೃಷ್ಟಿಯಾದಾಗ ಆಂಧ್ರದಪ್ರದೇಶಕ್ಕೆ ಅನ್ಯಾಯವಾಗಿದೆ ಎಂದು ನಾಯ್ಡು ದೂರಿದ್ದಾರೆ. ಆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಅಭಯ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ. ಅವರು ದ್ವೇಷದ ರಾಜಕೀಯದಲ್ಲಿ ತೊಡಗಿದ್ದು, ರಾಜಧರ್ಮ ಪಾಲನೆ ಮಾಡುತ್ತಿಲ್ಲ ಎಂದು ಅವರು ದೂರಿದರು.
2002ರಲ್ಲೇ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಗುಜರಾತ್ ನಲ್ಲಿ ರಾಜಧರ್ಮ ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಇದೀಗ ಮತ್ತದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಧಾನಿ ಹುದ್ದೆಯಲ್ಲಿದ್ದಾರೆ. ಈಗಲೂ ಅದೇ ಛಾಳಿ ಮುಂದುವರೆಸಿದ್ದು, ರಾಜಧರ್ಮ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು. ಅಂತೆಯೇ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಮ್ಮ ಹಕ್ಕು ಅದನ್ನು ಸಾಧಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ನೀವು ನೀಡದಿದ್ದರೆ ಅದನ್ನು ಹೇಗೆ ಸಾಧಿಸಬೇಕು ಎಂಬುದು ನಮಗೆ ಗೊತ್ತು ಎಂದು ಹೇಳಿದರು.
ಇನ್ನು ಇಂದಿನ ಧರಣಿಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಮತ್ತಿತ್ತರ ವಿಪಕ್ಷ ನಾಯಕರು ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT