ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್ ಸರ್ಕಾರದ ಅವಧಿಯ ಒಪ್ಪಂದದ ಅನ್ವಯವೇ ರಾಫೆಲ್ ಯುದ್ಧ ವಿಮಾನ ಖರೀದಿ!

ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.

ನವದೆಹಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ವತಃ ಯುಪಿಎ ಅವಧಿಯಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳೇ ಮಾಹಿತಿ ನೀಡಿದ್ದು, ರಾಫೆಲ್ ಯುದ್ಧ ವಿಮಾನಗಳನ್ನು ಈ ಹಿಂದಿನ 2013ರ ಒಪ್ಪಂದದ ಅನ್ವಯವೇ ಖರೀದಿ ಮಾಡಲಾಗಿದೆ ಎಂದು ಹೇಳಿದ್ದಾರೆ. 2013ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅಂದಿನ ರಕ್ಷಣಾ ಸಚಿವ ಎಕೆ ಆ್ಯಂಟನಿ ಅವರ ನೇತೃತ್ವದಲ್ಲಿ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಮೂಲ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಇದೊಂದು ಅಂತರ್ ಸರ್ಕಾರೀ ಒಪ್ಪಂದವಾಗಿದ್ದು, ಖಾಸಗಿ ಒಪ್ಪಂದವಲ್ಲ. ಫ್ರಾನ್ಸ್ ಸರ್ಕಾರದೊದಿಗಿನ ಒಪ್ಪಂದದ ಅನ್ವಯವೇ ಡಸ್ಸಾಲ್ಟ್ ಏವಿಯೇಷನ್ ನೊಂದಿಗೆ ಯುದ್ಧ ವಿಮಾನ ಖರೀದಿ ನಡೆಸಲಾಗಿದೆ. ಸ್ನೇಹಿತ ರಾಷ್ಟ್ರಗಳ ನಡುವಿನ ಒಪ್ಪಂದವಾದ್ದರಿಂದ ಸ್ಪರ್ಧಾತ್ಮಕ ಹಣಕಾಸು ಪ್ರಾಧಿಕಾರ (CFA-Competent Financial Authority) ನಿಯಮಾವಳಿಗಳ ಅನ್ವಯವೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಂತೆಯೇ ಸ್ನೇಹಿತ ರಾಷ್ಟ್ರಗಳಾದ್ದರಿಂದ ಒಪ್ಪಂದದಲ್ಲಿ ಕೆಲ ವಿನಾಯಿತಿ ಕೂಡ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.
ಅಂತೆಯೇ ಮಾಧ್ಯಮಗಳಲ್ಲಿನ ವರದಿಗಳನ್ನು ಅಲ್ಲ ಗಳೆದಿರುವ ಅಧಿಕಾರಿಗಳು, ಮೂಲ ಒಪ್ಪಂದದಂತೆ ಖರೀದಿ ಪ್ರಕ್ರಿಯೆ ನಡೆದಿದ್ದು, ಯಾವುದೇ ರೀತಿಯ ನಿಯಮಾವಳಿಗಳನ್ನೂ ಗಾಳಿಗೆ ತೂರಿಲ್ಲ. ಭ್ರಷ್ಟಾಚಾರ ನಿಗ್ರಹ ಅಂಶ ಖಾಸಗಿ ಸಂಸ್ಥೆಳೊಂದಿಗಿನ ಒಪ್ಪಂದಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು