ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್ ಸರ್ಕಾರದ ಅವಧಿಯ ಒಪ್ಪಂದದ ಅನ್ವಯವೇ ರಾಫೆಲ್ ಯುದ್ಧ ವಿಮಾನ ಖರೀದಿ!

ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.

ನವದೆಹಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಸ್ವತಃ ಯುಪಿಎ ಅವಧಿಯಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳೇ ಮಾಹಿತಿ ನೀಡಿದ್ದು, ರಾಫೆಲ್ ಯುದ್ಧ ವಿಮಾನಗಳನ್ನು ಈ ಹಿಂದಿನ 2013ರ ಒಪ್ಪಂದದ ಅನ್ವಯವೇ ಖರೀದಿ ಮಾಡಲಾಗಿದೆ ಎಂದು ಹೇಳಿದ್ದಾರೆ. 2013ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅಂದಿನ ರಕ್ಷಣಾ ಸಚಿವ ಎಕೆ ಆ್ಯಂಟನಿ ಅವರ ನೇತೃತ್ವದಲ್ಲಿ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಮೂಲ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಇದೊಂದು ಅಂತರ್ ಸರ್ಕಾರೀ ಒಪ್ಪಂದವಾಗಿದ್ದು, ಖಾಸಗಿ ಒಪ್ಪಂದವಲ್ಲ. ಫ್ರಾನ್ಸ್ ಸರ್ಕಾರದೊದಿಗಿನ ಒಪ್ಪಂದದ ಅನ್ವಯವೇ ಡಸ್ಸಾಲ್ಟ್ ಏವಿಯೇಷನ್ ನೊಂದಿಗೆ ಯುದ್ಧ ವಿಮಾನ ಖರೀದಿ ನಡೆಸಲಾಗಿದೆ. ಸ್ನೇಹಿತ ರಾಷ್ಟ್ರಗಳ ನಡುವಿನ ಒಪ್ಪಂದವಾದ್ದರಿಂದ ಸ್ಪರ್ಧಾತ್ಮಕ ಹಣಕಾಸು ಪ್ರಾಧಿಕಾರ (CFA-Competent Financial Authority) ನಿಯಮಾವಳಿಗಳ ಅನ್ವಯವೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಂತೆಯೇ ಸ್ನೇಹಿತ ರಾಷ್ಟ್ರಗಳಾದ್ದರಿಂದ ಒಪ್ಪಂದದಲ್ಲಿ ಕೆಲ ವಿನಾಯಿತಿ ಕೂಡ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.
ಅಂತೆಯೇ ಮಾಧ್ಯಮಗಳಲ್ಲಿನ ವರದಿಗಳನ್ನು ಅಲ್ಲ ಗಳೆದಿರುವ ಅಧಿಕಾರಿಗಳು, ಮೂಲ ಒಪ್ಪಂದದಂತೆ ಖರೀದಿ ಪ್ರಕ್ರಿಯೆ ನಡೆದಿದ್ದು, ಯಾವುದೇ ರೀತಿಯ ನಿಯಮಾವಳಿಗಳನ್ನೂ ಗಾಳಿಗೆ ತೂರಿಲ್ಲ. ಭ್ರಷ್ಟಾಚಾರ ನಿಗ್ರಹ ಅಂಶ ಖಾಸಗಿ ಸಂಸ್ಥೆಳೊಂದಿಗಿನ ಒಪ್ಪಂದಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT