ಸಂಗ್ರಹ ಚಿತ್ರ 
ದೇಶ

ರಾಫೆಲ್ ವಿವಾದ: ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶ ಕೈಬಿಟ್ಟಿದ್ದೇಕೆ: ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತೆ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾಫೆಲ್ ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳನ್ನು ಕೈ ಬಿಟ್ಟಿದ್ದೇಕೆ ಎಂದು ಪ್ರಶ್ನೆ ಮಾಡಿದೆ.

ನವದೆಹಲಿ: ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತೆ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾಫೆಲ್ ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳನ್ನು ಕೈ ಬಿಟ್ಟಿದ್ದೇಕೆ ಎಂದು ಪ್ರಶ್ನೆ ಮಾಡಿದೆ.
ರಾಫೆಲ್ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದಿ ಹಿಂದೂ ಪತ್ರಿಕೆ ಬಿಡುಗಡೆ ಮಾಡಿದ್ದ ರಹಸ್ಯ ತನಿಖಾ ವರದಿಯನ್ನಾಧರಿಸಿ ಕಾಂಗ್ರೆಸ್ ಮತ್ತೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಭದ್ರತಾ ಒಪ್ಪಂದಗಳಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳನ್ನು ಕೈ ಬಿಟ್ಟಿದ್ದೇಕೆ ಎಂದು ಪ್ರಶ್ನೆ ಮಾಡಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರು, ರಾಫೆಲ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಾಕಷ್ಟು ತಪ್ಪು ನಿರ್ಣಯಗಳನ್ನು ಕೈಗೊಂಡಿದ್ದು, 126 ಯುದ್ಧ ವಿಮಾನಗಳಿಗೆ ತಗುಲುವ ವೆಚ್ಚವನ್ನು ಕೇವಲ 36 ವಿಮಾನಗಳಿಗೆ ನೀಡಿ ಡಸ್ಸಾಲ್ಟ್ ಸಂಸ್ಛೆಗೆ ಆಜೀವ ಪರ್ಯಂತ ಲಾಭ ನೀಡಿದೆ. ಅಲ್ಲದೆ ಪ್ರಧಾನಿ ಕಚೇರಿ ಫ್ರಾನ್ಸ್ ಮೂಲದ ಡಸ್ಸಾಲ್ಟ್ ಏವಿಯೇಷನ್ ನೊಂದಿಗೆ ಖಾಸಗಿ ಚರ್ಚೆ ಗಳನ್ನು ನಡೆಸಿದ್ದು, ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕೈ ಬಿಡಲಾಗಿದೆ.
ಸರ್ಕಾರಿ ವ್ಯವಹಾರದಲ್ಲಿ ಪಿಎಂಒ ಖಾಸಗಿಯಾಗಿ ಚರ್ಚೆ ನಡೆಸುವ ಅವಶ್ಯಕತೆಯಾದರೂ ಏನಿತ್ತು. ಒಪ್ಪಂದದಲ್ಲಿ ಯಾವುದೇ ಅಧಿಕೃತ ಖಾತರಿ ಇಲ್ಲ, ಯಾವುದೇ ಬ್ಯಾಂಕಿನ ಖಾತರಿ ಇಲ್ಲ, ಅಧಿಕೃತ ಸ್ವೀಕೃತಿದಾರನೂ ಇಲ್ಲ. ಆದರೂ ದೊಡ್ಡ ಪ್ರಮಾಣದಲ್ಲಿ ವ್ಯವಹಾರ ನಡೆದಿದೆ. ಇದರಿಂದಲೇ ಒಪ್ಪಂದದಲ್ಲಿ ಮೋದಿ ಮತ್ತು ಸಂಗಡಿಗರಿಗೆ ಕಿಕ್ ಬ್ಯಾಕ್ ಬಂದಿದೆ ಎಂಬುದು ತಿಳಿಯುತ್ತದೆ ಎಂದು ಚಿದಂಬರಂ ಹೇಳಿದ್ದಾರೆ.
ಇನ್ನು ಈ ಹಿಂದೆ ಹಿಂದೂ ಪತ್ರಿಕೆ ಮಾಡಿದ್ದ ರಾಫೆಲ್ ಒಪ್ಪಂದದ ರಹಸ್ಯ ವರದಿಯಲ್ಲಿ ಕೇಂದ್ರ ಸರ್ಕಾರ ರಾಫೆಲ್ ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಮತ್ತು ಅಧಿಕೃತ ಖಾತೆಯಿಂದಲೇ ಹಣ ಪಾವತಿಯಂತಹ ಪ್ರಮುಖ ಅಂಶಗಳನ್ನು ಕೈ ಬಿಟ್ಟಿದೆ ಎಂದು ಹೇಳಲಾಗಿತ್ತು. ಈ ಅಂಶ ಇದೀಗ ಮತ್ತೆ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಮತ್ತೊಂದು ಹಂತದ ಜಂಗೀ ಕುಸ್ತಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು