ದೆಹಲಿ: ಕರೋಲ್ ಭಾಗ್ನಲ್ಲಿರುವ ಹೋಟೆಲ್ ಅರ್ಪಿತ್ ಪ್ಯಾಲೇಸ್ನಲ್ಲಿ ಬೆಳ್ಳಬೆಳಗ್ಗೆ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 9ಮಂದಿ ಸಜೀವದಹನವಾಗಿದ್ದಾರೆ
ಹೋಟೆಲ್ನಲ್ಲಿ ಕೇರಳದ 10 ಜನರ ಕುಟುಂಬ ಕೂಡ ಇಲ್ಲಿ ವಾಸ್ತವ್ಯ ಹೂಡಿತ್ತು. ಇವರಲ್ಲಿ ಒಬ್ಬರು ಮಹಿಳೆ ಹಾಗೂ ಮಗು ಸೇರಿ 9 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಗ್ನಿಯ ಕೆನ್ನಾಲಗೆಯು ಹೋಟೆಲ್ನ 40 ಕೊಠಡಿಗಳಿಗೂ ವ್ಯಾಪಿಸಿರುವ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡದ ಸುದ್ದಿ ಕೇಳಿ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸದ್ಯ ಸ್ಥಳದಲ್ಲಿ 26 ಅಗ್ನಿಶಾಮಕ ಪಡೆ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಈಗಾಗಲೆ ಐವರನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮೂವರು ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಮೂಲಗಳು ತಿಳಿಸಿದಂತೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.