ಪ್ರಿಯಾಂಕಾ ವಾದ್ರಾ ಮತ್ತು ರಾಬರ್ಟ್ ವಾದ್ರಾ( ಸಂಗ್ರಹ ಚಿತ್ರ) 
ದೇಶ

ಬಿಕಾನೇರ್ ಭೂಹಗರಣ: ಪತ್ನಿ ಪ್ರಿಯಾಂಕಾ ಜೊತೆ ಇ.ಡಿ ಕಚೇರಿಗೆ ಆಗಮಿಸಿದ ರಾಬರ್ಟ್ ವಾದ್ರಾ

ಬಿಕಾನೇರ್ ಭೂ ಹಗರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾ ಜೈಪುರದ ಜಾರಿ ನಿರ್ದೇಶನಾಲಯ ಕಚೇರಿಗೆ ತಮ್ಮ ....

ಜೈಪುರ: ಬಿಕಾನೇರ್ ಭೂ ಹಗರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾವ ರಾಬರ್ಟ್ ವಾದ್ರಾ ಜೈಪುರದ ಜಾರಿ ನಿರ್ದೇಶನಾಲಯ ಕಚೇರಿಗೆ ತಮ್ಮ ತಾಯಿ ಜೊತೆ ಹಾಜರಾದರು. 
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ನಿ ಪ್ರಿಯಾಂಕಾ ಗಾಂಧಿ ಅವರು ರಾಬರ್ಟ್‌ ವಾದ್ರಾ ಜತೆ ಇಡಿ ಕಾರ್ಯಾಲಯದ ವರೆಗೆ ಆಗಮಿಸಿದರು. 
ಜಾರಿ ನಿರ್ದೇಶನಾಲಯದ ಎದುರು ವಾದ್ರಾ ತನಿಖೆಗೆ ಹಾಜರಾಗುತ್ತಿರುವುದು ನಾಲ್ಕನೇ ಬಾರಿ ಮತ್ತು ಜೈಪುರದಲ್ಲಿ ಮೊದಲನೇ ಬಾರಿ ಯಾಗಿದೆ. 
ಭೂ ಕಬಳಿಕೆ ಹಗರಣದ ತನಿಖೆ ಸಂಬಂಧ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳಕೂಡದೆಂದು ವಿನಂತಿಸಿಕೊಂಡದ್ದನ್ನು ಪರಿಗಣಿಸಿದ್ದ ರಾಜಸ್ಥಾನ ಹೈಕೋರ್ಟ್‌, ಜೈಪುರದಲ್ಲಿನ ಇಡಿ ಕಾರ್ಯಾಲಯದಲ್ಲಿ ತನಿಖೆಗೆ ಹಾಜರಾಗಿ ಸಹಕರಿಸುವಂತೆ ರಾಬರ್ಟ್‌ ವಾದ್ರಾ ಮತ್ತು ಆತನ ತಾಯಿಗೆ ಸೂಚಿಸಿತ್ತು. 
ಅದರಂತೆ ರಾಬರ್ಟ್ ವಾದ್ರ ತಮ್ಮ ತಾಯಿಯನ್ನು ಕೂಡ ಇಡಿ ಕಚೇರಿಗೆ ಕರೆ ತಂದಿದ್ದರು, ಇನ್ನೂ ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ರಾಬರ್ಟ್ ವಾದ್ರಾ  ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT