ಪುಣೆ ಸಮೀಪ ಭೀಮಾ ಕೊರೆಗಾಂವ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಸುಟ್ಟು ಕರಕಲಾದ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆ 
ದೇಶ

ಭೀಮಾ-ಕೊರೆಗಾಂವ್ ಕೇಸು; ಮುಂಬೈ ಹೈಕೋರ್ಟ್ ತೀರ್ಪನ್ನು ತಳ್ಳಿ ಹಾಕಿದ 'ಸುಪ್ರೀಂ' ಕೋರ್ಟ್

ಭೀಮಾ ಕೊರೆಗಾಂವ್ ಜಾತಿ ಹಿಂಸಾಚಾರ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ನ ತೀರ್ಪನ್ನು ತಳ್ಳಿ ...

ನವದೆಹಲಿ: ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ನ ತೀರ್ಪನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ಐವರು ಕಾರ್ಯಕರ್ತರಿಗೆ ಜಾಮೀನು ನೀಡಲು ನಿರಾಕರಿಸಿದೆ. 
ಸುರೇಂದ್ರ ಗಡ್ಲಿಂಗ್, ಸುದೀರ್ ಧವಲೆ, ಮಹೇಶ್ ರಾವತ್, ರೊಮ ವಿಲ್ಸನ್ ಮತ್ತು ಸೊಮ ಸೇನ್ ತಪ್ಪಿನ ಲಾಭ ಪಡೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆಯಲು ಸಾಮಾನ್ಯ ಅರ್ಜಿಯನ್ನೇ ಸಲ್ಲಿಸಬೇಕಾಗಿದೆ.
ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕಾಯ್ದೆಯಡಿ ತ್ವರಿತ ವಿಚಾರಣಾಧೀನ ನ್ಯಾಯಾಲಯ ಐವರು ಕಾರ್ಯಕರ್ತರ ಮೇಲೆ ಆರೋಪಪಟ್ಟಿ ಸಲ್ಲಿಸಲು 90 ದಿನಗಳ ಕಾಲಾವಕಾಶವನ್ನು ಮಹಾರಾಷ್ಟ್ರ ಪೊಲೀಸರಿಗೆ ನೀಡಿತ್ತು. ಕ್ರಿಮಿನಲ್ ವಿಧಾನ ದಂಡಸಂಹಿತೆಯಡಿ 90 ದಿನಗಳ ಕಾಲಾವಕಾಶ ಮುಗಿದಿದೆ.
ಮಹಾರಾಷ್ಟ್ರದ ಭೀಮಾ ಕೊರೆಗಾಂವ್ ಗ್ರಾಮದಲ್ಲಿ ಕಳೆದ ವರ್ಷ ಜನವರಿ 1ರಂದು ಜಾತಿ ಹಿಂಸಾಚಾರ ಸೃಷ್ಟಿಸಿದ ಆರೋಪದ ಮೇಲೆ ವಿವಿಧ ಕಡೆಗಳಿಂದ ಐವರು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT