ಸಾಂದರ್ಭಿಕ ಚಿತ್ರ 
ದೇಶ

ರಾಫೆಲ್ ಡೀಲ್: ಅಸಮ್ಮತಿ ವರದಿ ತಳ್ಳಿಹಾಕಿದ ಐಎನ್ ಟಿ ಅಧ್ಯಕ್ಷ ಏರ್ ಮಾರ್ಷಲ್ ಭಡೌರಿಯಾ

ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಭಾರತೀಯ ಸಮಾಲೋಚನಾ ತಂಡ(ಐಎನ್ ಟಿ)ದ ಅಧ್ಯಕ್ಷ ಏರ್ ಮಾರ್ಷಲ್ ಆರ್...

ನವದೆಹಲಿ: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಭಾರತೀಯ ಸಮಾಲೋಚನಾ ತಂಡ(ಐಎನ್ ಟಿ)ದ ಅಧ್ಯಕ್ಷ ಏರ್ ಮಾರ್ಷಲ್ ಆರ್ ಕೆ ಎಸ್ ಭಡೌರಿಯಾ ಅವರು, 36 ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ತಾವು ಅಸಮ್ಮತಿ ವ್ಯಕ್ತಪಡಿಸಿರಲಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.
ರಾಫೆಲ್ ಡೀಲ್ ಗೆ ಐಎನ್ ಟಿ ಅಸಮ್ಮತಿ ವ್ಯಕ್ತಪಡಿಸಿತ್ತು ಎಂಬ ಮಾಧ್ಯಮ ವರದಿಗೆ ಪ್ರತಿಕ್ರಿಯಿಸಿದ ಭಡೌರಿಯಾ ಅವರು, ಏಳು ಜನರಿದ್ದ ತಂಡದಲ್ಲಿ ಮೂವರು ಕೆಲ ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ, ಅಸಮ್ಮತಿ ವ್ಯಕ್ತಪಡಿಸಿರಲಿಲ್ಲ ಎಂದು ಹೇಳಿದ್ದಾರೆ.
ಆ ಮೂವರು ನೀಡಿದ್ದ ಆಕ್ಷೇಪದ ವಿವರಗಳನ್ನು ಭಾರತೀಯ ಸಮಾಲೋಚನಾ ತಂಡದ ಅಧ್ಯಕ್ಷರಾಗಿದ್ದ ನನಗೆ ನೀಡಲಾಗಿತ್ತು. ಈ ಎಲ್ಲ ವಿಷಯಗಳ ಬಗ್ಗೆ ಹಿಂದೆಯೂ ಚರ್ಚೆ ಮಾಡಲಾಗಿತ್ತು ಮತ್ತು ಅವುಗಳಿಗೆ ಸೂಕ್ತ ಉತ್ತರ ನೀಡಲಾಗಿತ್ತು. ಎಲ್ಲ ಸಂದೇಹಗಳಿಗೆ ಉತ್ತರ ಕಂಡುಕೊಂಡ ನಂತರ ಸಲ್ಲಿಸಲಾದ ಅಂತಿಮ ವರದಿಯಲ್ಲಿ ಯಾವುದೇ ಆಕ್ಷೇಪಗಳೂ ಇರಲಿಲ್ಲ ಎಂದು ಭಡೌರಿಯಾ ಅವರು ಎಎನ್ಐಗೆ ತಿಳಿಸಿದ್ದಾರೆ.
ಐಎನ್ ಟಿ ತಂಡದಲ್ಲಿದ್ದ ಮೂವರು ಎಂಟು ಪುಟಗಳ ಅಸಮ್ಮತಿ ಪತ್ರವನ್ನು ಬರೆದಿದ್ದರು ಎಂಬ ಮಾಧ್ಯಮ ವರದಿಯನ್ನು ಭಡೌರಿಯಾ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಆ ಆಕ್ಷೇಪಗಳನ್ನು ಅಂತಿಮ ವರದಿಯಲ್ಲಿ ಕೂಡ ಸೇರಿಸಲಾಗಿತ್ತು. ಅವುಗಳಿಗೆ ಅನಗತ್ಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT