ಅರವಿಂದ್ ಕೇಜ್ರಿವಾಲ್ 
ದೇಶ

ಕಾಂಗ್ರೆಸ್ ವಾಸ್ತವಿಕವಾಗಿ ಆಪ್ ಜತೆ ಮೈತ್ರಿ ಕೈಬಿಟ್ಟಿದೆ: ಕೇಜ್ರಿವಾಲ್

ಕಾಂಗ್ರೆಸ್ ಹೆಚ್ಚು ಕಮ್ಮಿ ಆಪ್ ಜೊತೆ ಮೈತ್ರಿ ಕೈಬಿಟ್ಟಿದೆ ಎಂದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ನವದೆಹಲಿ: ಕಾಂಗ್ರೆಸ್ ಹೆಚ್ಚು ಕಮ್ಮಿ ಆಪ್ ಜೊತೆ ಮೈತ್ರಿ ಕೈಬಿಟ್ಟಿದೆ ಎಂದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ವರದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಕಾಂಗ್ರೆಸ್ ವಾಸ್ತವಿಕವಾಗಿ ಆಪ್ ಜತೆ ಮೈತ್ರಿ ಕೈಬಿಟ್ಟಿದೆ ಎಂದರು.
ಕಾಂಗ್ರೆಸ್ ಜತೆ ಮೈತ್ರಿಗೆ ಎಎಪಿ ಹೆಚ್ಚು ಉತ್ಸುಕವಾಗಿತ್ತೆ ಎಂಬ ಪ್ರಶ್ನೆಗೆ ಉತ್ತರಿಸಿದ ದೆಹಲಿ ಸಿಎಂ, ತ್ರಿಕೋನ ಸ್ಫರ್ಧೆಯಾದರೆ ಬಿಜೆಪಿಗೆ ಲಾಭವಾಗಲಿದೆ ಎಂದರು.
ನಿನ್ನೆಯಷ್ಟೇ ದೆಹಲಿಯಲ್ಲಿ ನಡೆದ ಬಿಜೆಪಿ ವಿರೋಧಿ ಬಣದ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಪ್ರತಿಪಕ್ಷಗಳ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ನಿವಾಸದಲ್ಲಿ ಈ ಪ್ರತಿಪಕ್ಷಗಳ ಸಭೆಯನ್ನು ಆಯೋಜಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT