ಪುಲ್ವಾಮ ಭಯೋತ್ಪಾದಕ ದಾಳಿ: 10 ಕಿ.ಮೀ ವರೆಗೂ ಕೇಳಿದ್ದ ಸ್ಪೋಟದ ಶಬ್ದ! 
ದೇಶ

ಪುಲ್ವಾಮ ಭಯೋತ್ಪಾದಕ ದಾಳಿ: 10 ಕಿ.ಮೀ ವರೆಗೂ ಕೇಳಿದ್ದ ಸ್ಪೋಟದ ಶಬ್ದ!

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಯೋಧರನ್ನು ಟಾರ್ಗೆಟ್ ಮಾಡಿಕೊಂಡು ನಡೆಸಿದ ದಾಳಿಯ ತೀವ್ರತೆಗೆ ಪುಲ್ವಾಮ ಜಿಲ್ಲೆಯ ಸ್ಥಳೀಯರು ಅಕ್ಷರಸಹ ಬೆಚ್ಚಿಬಿದ್ದಿದ್ದಾರೆ.

ಶ್ರೀನಗರ: ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಯೋಧರನ್ನು ಟಾರ್ಗೆಟ್ ಮಾಡಿಕೊಂಡು ನಡೆಸಿದ ದಾಳಿಯ ತೀವ್ರತೆಗೆ ಪುಲ್ವಾಮ ಜಿಲ್ಲೆಯ ಸ್ಥಳೀಯರು ಅಕ್ಷರಸಹ ಬೆಚ್ಚಿಬಿದ್ದಿದ್ದಾರೆ. 
ಸಿಆರ್ ಪಿಎಫ್ ಸಿಬ್ಬಂದಿ ಸಂಚರಿಸುತ್ತಿದ್ದ ವಾಹನದ ಮೇಲೆ ಸ್ಫೋಟಕಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ನುಗ್ಗಿಸಿದಾಗ ಉಂಟಾದ ಸ್ಫೋಟದ ಶಬ್ದ ಸುಮಾರು 10-12 ಕಿ.ಮೀ ವರೆಗೂ ಕೇಳಿದೆ. ಅಷ್ಟೇ ಅಲ್ಲದೇ ಪುಲ್ವಾಮ ಜಿಲ್ಲೆಗೆ ಹತ್ತಿರವಿರುವ ಶ್ರೀನಗರದ ಕೆಲವು ಪ್ರದೇಶಗಳಿಗೂ ಸಹ ಸ್ಫೋಟದ ಸದ್ದು ಕೇಳಿದೆ ಎಂದು ಸ್ಥಳಿಯರು ಹೇಳಿದ್ದಾರೆ. 
2001 ರಲ್ಲಿ ಕಾಶ್ಮೀರದಲ್ಲಿ ವಿಧಾನಸಭೆ ಮೇಲೆ ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 41 ಜನರು ಮೃತಪಟ್ಟಿದ್ದರು. ಈ ದಾಳಿಯ ನಂತರ ಕಾಶ್ಮೀರದಲ್ಲಿ ನಡೆದಿರುವ ಅತಿ ಭೀಕರವಾದ ದಾಳಿ ಇದಾಗಿದ್ದು, 
ಸ್ಫೋಟ ಸಂಭವಿಸುತ್ತಿದ್ದಂತೆಯೇ ಘಟನಾ ಸ್ಥಳದ 300 ಮೀಟರ್ ಆಸುಪಾಸಿನಲ್ಲಿದ್ದ ಅಂಗಡಿ ಮಾಲಿಕರು ಭಯಗೊಂಡು ಬಾಗಿಲು ಕೆಳಗೆಳೆದಿದ್ದರೆ ಇನ್ನೂ ಕೆಲವರು ರಕ್ಷಣೆಗಾಗಿ ದಿಕ್ಕಾಪಾಲಾಗಿ ಓಡಲು ಪ್ರಾರಂಭಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 
ಈ ಘಟನೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ನಡೆದಿದ್ದು, ಈ ಹಿಂದೆಯೂ ಇದೇ ಹೆದ್ದಾರಿಯಲ್ಲಿ ಹಲವು ಭಯೋತ್ಪಾದಕ ದಾಳಿಗಳು ನಡೆದಿವೆ. ಡಿ.31, 2017 ರಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ದಾಳಿಗೆ ಸಿಆರ್ ಪಿಎಫ್ ನ 5 ಸಿಬ್ಬಂದಿಗಳು ಹುತಾತ್ಮರಾಗಿದ್ದರು. 
ಪಾಂಪೋರ್ ನಲ್ಲಿ 2016 ರಲ್ಲಿ ಸಿಆರ್ ಪಿಎಫ್ ಮೇಲೆ ನಡೆದ ದಾಳಿಯಲ್ಲಿ 8 ಯೋಧರು ಹುತಾತ್ಮರಾಗಿದ್ದರೆ 22 ಯೋಧರಿಗೆ ಗಾಯಗಳಾಗಿ ಬದುಕುಳಿದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT