ಸತ್ಯಪಾಲ್ ಮಲಿಕ್ 
ದೇಶ

ಪುಲ್ವಾಮಾ ಉಗ್ರರ ದಾಳಿಗೆ ಭದ್ರತಾ ಲೋಪವೇ ಕಾರಣ: ರಾಜ್ಯಪಾಲ ಸತ್ಯಪಾಲ್ ಮಲಿಕ್

ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಲೋಪವಾಗಿರುವುದು ನಿಜ ಎಂದು ಜಮ್ಮು ಮತ್ತು ಕಾಶ್ಮೀರ ...

ಶ್ರೀನಗರ ಮತ್ತು ನವದೆಹಲಿ: ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಲೋಪವಾಗಿರುವುದು ನಿಜ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಒಪ್ಪಿಕೊಂಡಿದ್ದಾರೆ.
ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಸಾವನ್ನಪ್ಪಿದ್ದರು, ಸುಮಾರು 78 ಬಸ್ ಗಳಲ್ಲಿ 2500 ಮಂದಿ ಯೋಧರು ಹಲವು ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದರು, ಆದರೆ ಹಾಗೆ ಒಟ್ಟಾಗಿ ಅಷ್ಟು ಮಂದಿ ಪ್ರಯಾಣಿಸಬಾರದಿತ್ತು, ಒಂದು ವೇಳೆ ಪ್ರಯಾಣಿಸಲೇ ಬೇಕಿದ್ದರೇ ವೇಗವಾಗಿ ಸಂಚರಿಸಬೇಕಿತ್ತು ಎಂದು ಹೇಳಿದ್ದಾರೆ.
ಹೆದ್ದಾರಿಯಲ್ಲಿ ಸರಿಯಾದ ಸೆಕ್ಯೂರಿಟಿ ಚೆಕ್ ಮಾಡಬೇಕಿತ್ತು, ಸರಿಯಾದ ಭದ್ರತಾ ಕಣ್ಗಾವಲು ನಡೆಸಬೇಕಿತ್ತು, ಹೀಗೆ ಮಾಡಿದ್ದರೇ ಸಾವಿನ ಸಂಖ್ಯೆ ಕಡಿಮೆಯಾಗುತ್ತಿತ್ತು ಎಂದು ಹೇಳಿದ್ದಾರೆ.
ಖಂಡಿತವಾಗಿಯೂ ಭದ್ರತಾ ಲೋಪವಾಗಿದೆ, ಈಗಲಾದರೂ ಭದ್ರತಾ ಪಡೆಗಳು ಒಟ್ಟಾಗಿ ಕುಳಿತು ತೆಗೆದುಕೊಂಡ ಕ್ರಮಗಳ ಬಗ್ಗೆ ವಿಶ್ಲೇಷಣೆ ನಡೆಸಬೇಕು ಹಾಗೂ ತಮ್ಮ ಲೋಪದೋಷಗಳನ್ನು ಸರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಕರಣದ ನಂತರ ಹಲವು ಪ್ರಶ್ನೆಗಳು ಎದ್ದಿವೆ, ಜೈಶ್-ಇ -ಮೊಹಮದ್ ಉಗ್ರರು ಹಲವು ಬಾರಿ ಎಚ್ಚರಿಕೆ ನೀಡಿದ್ದರು ಎಂಬ ವರದಿಗಳು ಬಂದಿವೆ, ಅದನ್ನು ಭದ್ರತಾ ಪಡೆಗಳು ಗಂಭೀರವಾಗಿ ಪರಿಗಣಿಸಬೇಕಿತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT