ಪುಲ್ವಾಮ ಭಯೋತ್ಪಾದಕ ದಾಳಿ ಸಂಬಂಧ 7 ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು! 
ದೇಶ

ಪುಲ್ವಾಮ ಭಯೋತ್ಪಾದಕ ದಾಳಿ ಸಂಬಂಧ 7 ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು!

ಪುಲ್ವಾಮದಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು 7 ಜನರನ್ನು

ಶ್ರೀನಗರ: ಪುಲ್ವಾಮದಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ  ಜಮ್ಮು-ಕಾಶ್ಮೀರ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. 
ಆತ್ಮಾಹುತಿ ದಾಳಿ ನಡೆಸುವುದಕ್ಕೆ ಯೋಜನೆ ರೂಪಿಸಿದ್ದರೊಂದಿಗೆ ನಂಟು ಹೊಂದಿರುವ ಶಂಕೆಯಡಿ ಪುಲ್ವಾಮ ಹಾಗೂ ಅವಂತಿಪೊರದಿಂದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. 
ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯನ್ನು ಪಾಕಿಸ್ತಾನದ ವ್ಯಕ್ತಿ ಜೈಶ್-ಎ-ಮೊಹಮ್ಮದ್ ನ ಕಮ್ರಾನ್ ಎಂಬ ವ್ಯಕ್ತಿ ಯೋಜಿಸಿದ್ದಾನೆ. ಈ ವ್ಯಕ್ತಿ ಪುಲ್ವಾಮ, ಅವಂತಿಪೊರ ಹಾಗೂ ದಕ್ಷಿಣ ಕಾಶ್ಮೀರದ ತ್ರಾಲ್ ನಲ್ಲಿ ಸಂಚರಿಸುತ್ತಿರುತ್ತಾನೆ ಎಂದು ತಿಳಿದುಬಂದಿದೆ. 
ಭಯೋತ್ಪಾದಕ ಕೃತ್ಯವನ್ನು ಟ್ರಾಲ್ ನ ಮಿಡೂರಾದಲ್ಲಿ ಯೋಜಿಸಲಾಗಿತ್ತು, ಈ ದುಷ್ಕೃತ್ಯವನ್ನು ಯೋಜಿಸಿ ಸ್ಫೋಟಕಗಳನ್ನು ಸಿಗುವಂತೆ ಮಾಡಿದ್ದ ಮತ್ತೋರ್ವ ಜೆ ಇಎಂ ನ ಉಗ್ರನನ್ನು ಪೊಲೀಸರು ಹುಡುಕುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT