ಬಾಂಬ್ ದಾಳಿ ನಡೆದ ಸ್ಥಳ 
ದೇಶ

ಸೈನಿಕರ ಐಡಿ ಕಾರ್ಡ್, ಆಧಾರ್ ಕಾರ್ಡ್ ನೆರವಿನಿಂದ ಹುತಾತ್ಮ ಯೋಧರ ಗುರುತು ಪತ್ತೆ

ಸಿಆರ್ ಪಿಎಫ್ ಯೋಧರನ್ನು ಆಧಾರ್ , ಐಡಿ ಕಾರ್ಡ್, ರಜೆ ಅಪ್ಲಿಕೇಷನ್ ಮತ್ತಿತರ ದಾಖಲೆಗಳಿಂದ ಪತ್ತೆ ಹಚ್ಚಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಪುಲ್ವಾಮಾ ಭೀಕರ ಉಗ್ರರ ದಾಳಿಯಲ್ಲಿ ದೇಹ ಛಿದ್ರಗೊಂಡು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದಿದ್ದ ಸಿಆರ್ ಪಿಎಫ್ ಯೋಧರನ್ನು  ಆಧಾರ್ , ಐಡಿ ಕಾರ್ಡ್, ರಜೆ ಅಪ್ಲಿಕೇಷನ್ ಮತ್ತಿತರ ದಾಖಲೆಗಳಿಂದ ಪತ್ತೆ ಹಚ್ಚಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ  ಗುರುವಾರ ಸೈನಿಕರು ಸಂಚರಿಸುತ್ತಿದ್ದ ಬಸ್ ಮೇಲೆ 100 ಕೆಜಿ ಸ್ಟೋಟಕದೊಂದಿಗೆ ಆತ್ಮಾಹುತಿ ಬಾಂಬರ್ ನಡೆಸಿದ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಘಟನೆಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಗಾಯಗೊಂಡಿದ್ದರು.

ಆರ್ ಡಿಎಕ್ಸ್ ಪ್ರಚೋದಿತ ಸ್ಪೋಟದ ಪರಿಣಾಮದಿಂದಾಗಿ ಸೈನಿಕರ ದೇಹಗಳು ಛಿದ್ರಗೊಂಡು ಸುಟ್ಟುಕರಕಲಾಗಿದ್ದ ಮೃತದೇಹಗಳ ಗುರುತನ್ನು ಕಂಡುಹಿಡಿಯಲು ಬಹಳ ಕಷ್ಟವಾಗಿತ್ತು.  ಬಹುತೇಕ  ಯೋಧರನ್ನು ಅವರ  ಪಾಕೆಟ್ ಹಾಗೂ ಬ್ಯಾಗ್ ನಲ್ಲಿದ್ದ  ಗುರುತಿನ ಕಾರ್ಡ್, ಆಧಾರ್, ಪ್ಯಾನ್ ಕಾರ್ಡ್ ಮತ್ತಿತರ ದಾಖಲೆಗಳಿಂದ ಪತ್ತೆ ಹಚ್ಚಲಾಯಿತು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಹುತಾತ್ಮ ಯೋಧರೆಲ್ಲರ ಗುರುತು ಪತ್ತೆ ಹಚ್ಚಿ ಅವರ ಕುಟುಂಬ ವರ್ಗಕ್ಕೆ  ಮಾಹಿತಿ ಮುಟ್ಟಿಸಲಾಯಿತು. ಈ ತಂಡದಲ್ಲಿದ್ದ ಒಬ್ಬರು ದೆಹಲಿಯಲ್ಲಿದ್ದರೆ ಮತ್ತೊಬ್ಬರು ತುರ್ತು ಕೆಲಸದ ನಿಮಿತ್ತ  ಕೊನೆಯ ಕ್ಷಣದಲ್ಲಿ ಪ್ರಯಾಣವನ್ನು ರದ್ದುಗೊಳಿಸಿದ್ದರಿಂದ ಸಾವಿನಿಂದ ಪಾರಾಗಿದ್ದಾರೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದ್ದಾರೆ.

ಮೃತದೇಹಗಳು ಛಿದ್ರಗೊಂಡಿದ್ದರಿಂದ ಮೃತರ ಸಂಖ್ಯೆಯನ್ನು ನಿರ್ದಿಷ್ಟಪಡಿಸುವಲ್ಲಿ ವೈದ್ಯರಿಗೆ ಧೀರ್ಘ ಸಮಯ ಬೇಕಾಯಿತು. ಸ್ಟೋಟ ನಡೆದ ಸ್ಥಳದಲ್ಲಿ ಬಿದಿದ್ದ ದೇಹಗಳನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆ ನಡೆಸಿ ಸೈನಿಕರ ಗುರುತು ಪತ್ತೆ ಹಚ್ಚಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT