ಸಂಗ್ರಹ ಚಿತ್ರ 
ದೇಶ

ಮೊದಲೇ ಸುಳಿವು ಸಿಕ್ಕಿತ್ತು, ಆದರೂ ಪುಲ್ವಾಮಾದಲ್ಲಿ ಭೀಕರ ಉಗ್ರ ದಾಳಿ; ತಪ್ಪಾಗಿದ್ದೆಲ್ಲಿ?

ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ದಾಳಿ ನಡೆಸುತ್ತದೆ ಎಂಬ ಸುಳಿವು ಸಿಕ್ಕಿತ್ತು. ಆದರೂ ಯೋಧರ ಸಾವನ್ನು ತಪ್ಪಿಸಲು ಸಾಧ್ಯವಾಗಿಲ್ಲ.

ನವದೆಹಲಿ: ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ದಾಳಿ ನಡೆಸುತ್ತದೆ ಎಂಬ ಸುಳಿವು ಸಿಕ್ಕಿತ್ತು. ಆದರೂ ಯೋಧರ ಸಾವನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಮೇಲ್ನೋಟಕ್ಕೆ ಇಲ್ಲಿ ಯಾವುದೇ ಭದ್ರತಾ ವೈಫಲ್ಯ ಆಗಿಲ್ಲ. ಆದರೆ ದಾಳಿಗೆ ನಾಗರಿಕ ವಾಹನ ಬಳಸಿದ್ದರಿಂದ ಇಂತಾ ಭೀಕರ ದಾಳಿ ನಡೆದಿದೆ. 
ಭಾರತೀಯ ಸೇನೆಯ ಮೇಲೆ ಭಾರಿ ಪ್ರಮಾಣದಲ್ಲಿ ದಾಳಿ ನಡೆಸಲು ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ವರ್ಷದ ಹಿಂದೆಯೇ ಪ್ಲಾನ್ ಮಾಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಭಾರತದ ಗುಪ್ತಚರರಿಗೆ ಈ ಪ್ಲಾನ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದೇ ರೀತೆ ಸೇನೆ ಸಹ ಭದ್ರತಾ ತಪಾಸಣೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿತ್ತು. ಆದರೆ ಸ್ಥಳೀಯ ಜನರಿಗೆ ಹೆದ್ದಾರಿ ಬಳಸಲು ನೀಡಲಾಗಿದ್ದ ಮುಕ್ತ ಅವಕಾಶವನ್ನು ಉಗ್ರಗಾಮಿಯೂ ತನ್ನ ಕೃತ್ಯಕ್ಕೆ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತದೆ.
ದಾಳಿಯ ಸಂದರ್ಭದಲ್ಲಿ 78 ವಾಹನಗಳಲ್ಲಿ ಒಟ್ಟು 2,547 ಯೋಧರು ಎರಡು ಭಾಗಗಳಾಗಿ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದರು. ಕಳೆದ 6 ದಿನಗಳಿಂದ ಈ ಹೆದ್ದಾರಿ ಬಂದ್ ಆಗಿದ್ದರಿಂದ ನಿನ್ನೆ ಮಾಮೂಲಿಗಿಂತ ಹೆಚ್ಚು ಸೈನಿಕರು ಆ ಮಾರ್ಗದಲ್ಲಿ ಹೋಗುತ್ತಿದ್ದರು. ಇದೇ ಸಮಯಕ್ಕೆ ಕಾಯುತ್ತಿದ್ದ ಉಗ್ರರಿಗೆ ಇನ್ನೂ ಹೆಚ್ಚು ಮಂದಿಯನ್ನು ಕೊಲ್ಲುವ ಗುರಿ ಇತ್ತು. ಆದರೆ ಯೋಧರ ಒಂದು ಬಸ್ ಮಾತ್ರ ದಾಳಿಗೆ ತುತ್ತಾಗಿದೆ. 
ದಾಳಿಯ ಮುನ್ಸೂಚನೆ ಇದ್ದರಿಂದ ಟ್ರಕ್ ಸಾಗುವ ಮಾರ್ಗವನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗಿತ್ತು. ಅಲ್ಲಿ ಯಾವುದೇ ಐಇಡಿ ಸ್ಫೋಟಕಗಳು ಪತ್ತೆಯಾಗಲಿಲ್ಲ. ಗುಂಡು ಅಥವಾ ಗ್ರೆನೇಡ್ ದಾಳಿ ಆಗುವ ಯಾವುದೇ ಅಪಾಯವೂ ಕಾಣಲಿಲ್ಲ. ಆದರೆ ಹೆದ್ದಾರಿಗೆ ಕೂಡಿಕೊಳ್ಳುವ ಅಡ್ಡ ರಸ್ತೆಯಿಂದ ಬಂದ ವಾಹನವು ಈ ದುರಂತಕ್ಕೆ ಕಾರಣವಾಗಿರುವುದು ಸದ್ಯಕ್ಕೆ ತಿಳಿದುಬಂದ ಮಾಹಿತಿಯಾಗಿದೆ.
ಜಮ್ಮು ಕಾಶ್ಮೀರದ ಸ್ಥಳೀಯರಿಗೆ ಹೆದ್ದಾರಿ ಬಳಸುವ ಮುಕ್ತ ಅವಕಾಶ ನೀಡಿದ್ದು ದೊಡ್ಡ ತಪ್ಪಾಗಿದೆ. ಆತ್ಮಾಹುತಿ ದಾಳಿಕೋರನು ಸ್ಥಳೀಯ ಗ್ರಾಮಸ್ಥರು ಸಂಚರಿಸುವ ಸರ್ವಿಸ್ ರೋಡ್ ಮುಖಾಂತರ ತನ್ನ ವಾಹನವನ್ನು ಚಲಾಯಿಸಿಕೊಂಡು ಬಂದು ಯೋಧರ ಕಾನ್ವಾಯ್ ನತ್ತ ನುಗ್ಗಿಸಿರುವ ಸಾಧ್ಯತೆ ಇದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT