ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ದೆಹಲಿಯಿಂದ ಇಂದು ಮೊದಲ ಪ್ರಯಾಣಿಕ ಸಂಚಾರ ಆರಂಭಿಸಿದ ವಂದೇ ಭಾರತ್ ಎಕ್ಸ್ ಪ್ರೆಸ್

ಭಾರತದ ಮೊದಲ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ತನ್ನ ಮೊದಲ ಸಂಚಾರವನ್ನು ...

ನವದೆಹಲಿ: ಭಾರತದ ಮೊದಲ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ತನ್ನ ಮೊದಲ ಸಂಚಾರವನ್ನು ಭಾನುವಾರ ಆರಂಭಿಸಿದೆ. ನಿನ್ನೆ ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು.
ಇಂದು ಬೆಳಗ್ಗೆ ದೆಹಲಿಯಿಂದ ವಾರಣಾಸಿ ಕಡೆ ಪ್ರಯಾಣ ಬೆಳೆಸಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮುಂದಿನ ಎರಡು ವಾರಗಳವರೆಗೆ ಟಿಕೆಟ್ ಪ್ರಯಾಣಿಕರು ಕಾಯ್ದಿರಿಸಿದ್ದಾರೆ. 
ನಿನ್ನೆ ತಾಂತ್ರಿಕ ದೋಷ ಕಂಡುಬಂದ ನಂತರ ಅದನ್ನು ಎಂಜಿನಿಯರ್ ಗಳು ಪರೀಕ್ಷಿಸಿ ಬಿಟ್ಟಿದ್ದರು. ಆರಂಭದಲ್ಲಿ ಈ ರೈಲಿಗೆ ಟ್ರೈನ್ 18 ಎಂದು ಹೆಸರಿಡಲಾಗಿತ್ತು. 
ಉದ್ಘಾಟನೆಯಾದ ಮರುದಿನವೇ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಯ ಕಾಲೆಳೆದಿದ್ದರು. ಮೇಕ್ ಇನ್ ಇಂಡಿಯಾ ವಿಫಲ ಎಂದು ಹೇಳಿದ್ದರು.
 ಅದಕ್ಕೆ ಟ್ವೀಟ್ ನಲ್ಲಿ ಉತ್ತರಿಸಿರುವ ಗೋಯಲ್, ಭಾರತದ ಎಂಜಿನಿಯರ್, ತಂತ್ರಜ್ಞರು ಮತ್ತು ಕಾರ್ಮಿಕರನ್ನು ನೀವು ಕಡೆಗಣಿಸಿದ್ದೀರಿ. ನಿಮ್ಮ ಮನೋಧರ್ಮವನ್ನು ಬದಲಿಸಿಕೊಳ್ಳಿ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT