ಯೆಚೂರಿ, ಪ್ರಧಾನಿ ಮೋದಿ 
ದೇಶ

ಮೋದಿ ಮತ್ತೆ ಪ್ರಧಾನಿಯಾದರೆ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ- ಯೆಚೂರಿ

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಕೇರಳ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿವೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವೈಫಲ್ಯ ವಿರೋಧಿಸಿ ಉತ್ತರ ಕೇರಳ ವಲಯದಲ್ಲಿ ಕೇರಳ ಸಂರಕ್ಷಣಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯೆಚೂರಿ,  ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಾಂವಿಧಾನಿಕ ಸಂಸ್ಥೆಗಳು ನಾಶ ಹೊಂದಲಿದ್ದು, ಸಮಾಜದಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ದೊಡ್ಡ ಕಂದಕ ನಿರ್ಮಾಣವಾಗಲಿದೆ ಎಂದರು.

ಪುಲ್ವಾಮಾ ದಾಳಿ ಕುರಿತು ಮಾತನಾಡಿದ ಯೆಚೂರಿ, ಇದೊಂದು ಉಗ್ರರ ದಾಳಿಯಾಗಿದ್ದು,  ರಾಜಕೀಯ ಲಾಭಕ್ಕಾಗಿ ಕೋಮುವಾದೀಕರಿಸಬಾರದು, ಭಯೋತ್ಪಾದನೆ ವಿರುದ್ಧ ದೇಶ ಒಂದೇ ನಿಲುವು ತಾಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮುಂಬರುವ ಲೋಕಸಭಾ ಚುನಾವಣೆ ಮೇಲೆ ಶಬರಿಮಲೆ ವಿವಾದ  ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಕಮ್ಯೂನಿಸ್ಟ್ ಪಕ್ಷಕ್ಕೆ ಪ್ರತಿಸ್ಪರ್ಧಿಗಳಾಗಿವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT