ಪುಲ್ವಾಮ ದಾಳಿ: ಯೋಧರ ಮೇಲಿನ ದಾಳಿಯ ನಡುವೆಯೂ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಕಿರಾತಕರು, ಅದನ್ನು ನಂಬಬೇಡಿ 
ದೇಶ

ಪುಲ್ವಾಮ ದಾಳಿ: ಯೋಧರ ಮೇಲಿನ ದಾಳಿಯ ನಡುವೆಯೂ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಕಿರಾತಕರು, ಅದನ್ನು ನಂಬಬೇಡಿ

ಪುಲ್ವಾಮದಲ್ಲಿ ಸಿಆರ್ ಪಿಎಫ್ ಮೇಲೆ ದಾಳಿ ನಡೆದ ಬೆನ್ನಲ್ಲೇ ದೇಶದ ವಿವಿಧ ಭಾಗಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುದ್ದಿ ಹರಡಿದೆ.

ನವದೆಹಲಿ: ಪುಲ್ವಾಮದಲ್ಲಿ ಸಿಆರ್ ಪಿಎಫ್ ಮೇಲೆ ದಾಳಿ ನಡೆದ ಬೆನ್ನಲ್ಲೇ ದೇಶದ ವಿವಿಧ ಭಾಗಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುದ್ದಿ ಹರಡಿದೆ. ಆದರೆ ಇದು ಸುಳ್ಳು ಸುದ್ದಿ, ದ್ವೇಷವನ್ನು ಹರಡುವುದಕ್ಕಾಗಿ ಹಬ್ಬಿಸಲಾಗುತ್ತಿದೆ ಎಂದು ಸಿಆರ್ ಪಿಎಫ್ ಸ್ಪಷ್ಟಪಡಿಸಿದೆ. 
ಭಯೋತ್ಪಾದಕ ದಾಳಿಯ ನಂತರ ಛಿದ್ರಗೊಂಡಿರುವ ಯೋಧರ ದೇಹದ ಫೋಟೊಗನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೈಕಿ ಅತ್ಯಂತ ಕೆಟ್ಟ ಸ್ಥಿತಿಯಲ್ಲಿರುವ ಕೆಲವೊಂದು ನಕಲಿ ಫೋಟೋಗಳೂ ಇದ್ದು, ಜನತೆ ಈ ರೀತಿಯದ್ದನ್ನು ಕಂಡಲ್ಲಿ ಹಂಚಿಕೊಳ್ಳದೇ ಅದನ್ನು ಕೂಡಲೇ  webpro@crpf.gov.in ಎಂಬ ಇಮೇಲ್ ಖಾತೆಗೆ ವಿವರಗಳನ್ನು ಕಳಿಸಬೇಕೆಂದು ಸಿಆರ್ ಪಿಎಫ್ ಮನವಿ ಮಾಡಿದೆ.
ಇನ್ನು ಇದೇ ವೇಳೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೆ ಈ ಮಾಹಿತಿಯನ್ನೂ ಸಿಆರ್ ಪಿಎಫ್ ಹೆಲ್ಪ್ ಲೈನ್ ಪರಿಶೀಲಿಸಿದ್ದು ಈ ರೀತಿಯ ಮಾಹಿತಿ ನೈಜವಾದದ್ದಲ್ಲ, ಸುಳ್ಳು ಸುದ್ದಿ ಎಂಬುದು ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನೂ ಜನರು ನಂಬಬಾರದೆಂದು ಸಿಆರ್ ಪಿಎಫ್ ಸಲಹೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ; ಜು.2 ರಂದು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್