ಅಟಲ್ ಬಿಹಾರಿ ವಾಜಪೇಯಿ 
ದೇಶ

ಎನ್ ಸಿಇಆರ್ ಟಿ ಪಠ್ಯಪುಸ್ತಕದಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಕವಿತೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕವಿತೆಯನ್ನು ನ್ಯಾಷನಲ್ ಕೌನ್ಸಿಲ್ ಆಪ್ ಎಜುಕೇಷನ್ ರಿಸರ್ಚ್ ಆಂಡ್ ಟ್ರೈನಿಂಗ್(ಎನ್ ಸಿಇಆರ್ ಟಿ) ಎಂಟನೇ ತರಗತಿ ಪಠ್ಯಪುಸ್ತಕದಲ್ಲಿ ಸೇರ್ಪಡಿಸಲಾಗಿದೆ.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕವಿತೆಯನ್ನು ನ್ಯಾಷನಲ್ ಕೌನ್ಸಿಲ್ ಆಪ್ ಎಜುಕೇಷನ್ ರಿಸರ್ಚ್  ಆಂಡ್  ಟ್ರೈನಿಂಗ್(ಎನ್ ಸಿಇಆರ್ ಟಿ) ಎಂಟನೇ ತರಗತಿ ಪಠ್ಯಪುಸ್ತಕದಲ್ಲಿ ಸೇರ್ಪಡಿಸಲಾಗಿದೆ.
ವಾಜಪೇಯಿ ಅವರ ಕೊಡುಗೆಗಳನು ದೇಶದ ಭವಿಷ್ಯದ ಪೀಳಿಗೆಗೆ ಪರಿಚಯಿಸುವ ಮಾರ್ಗಗಳಲ್ಲಿ ಇದೂ ಒಂದಾಗಿದೆ ಎಂದು ಸರ್ಕಾರ  ಹೇಳಿದೆ.
ವಾಜಪೇಯಿಯವರ ಕದಂ ಮಿಲಾಕರ್​ ಚಲ್ನಾ ಹೋಗಾ (ಹೆಜ್ಜೆಯೊಂದಿಗೆ ಹೆಜ್ಜೆ ಸೇರಿಸುತ್ತ ಎಲ್ಲರೂ ಒಂದಾಗಿ ಮುಂದೆ ಸಾಗಬೇಕು) ಎಂಬ ಕವನವನ್ನು ಎಂಟನೇ ತರಗತಿ ಪಠ್ಯದಲಿ ಅಳವಡಿಸಲಾಗಿದೆ. ವಸಂತ್ ಎಂಬ ಹೆಸರಿನ ಹಿಂದಿ ಪಠ್ಯಪುಸ್ತಕದಲ್ಲಿ ರಾಮ್ ಧಾರಿ ಸಿಂಗ್ ದಿನಕರ್, ಹಜಾರಿ ಪ್ರಸಾದ್ ದ್ವಿವೇದಿ, ಸೂರ್ಯಕಾಂತ್ ತ್ರಿಪಾಠಿ ಸೇರಿ ಅನೇಕ ಪ್ರಸಿದ್ದ ಬರಹಗಾರರ ಕಥೆ, ಪ್ರಬಂಧ, ಲೇಖನಗಳಿದೆ. ಇದರ ನಡುವೆ ಈಗ ವಾಜಪೇಯಿಯವರ ಕವಿತೆ ಸೇರ್ಪಡಿಸಲಾಗಿದೆ.
ಈ ಪರಿಷ್ಕೃತ ಪಠ್ಯವು ಮುಂದಿನ ಮಾರ್ಚ್ ವೇಳೆಗೆ ಪ್ರಕಟವಾಗಲಿದ್ದು ಬರುವ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಬೋಧನೆಗೆ ಸಿಗಲಿದೆ.
ಕಳೆದ ವರ್ಷ ಆಗಸ್ಟ್ 16ರಂದು ಭಾರತ ರತ್ನ ಪುರಸ್ಕೃತರಾದ ಮಾಜಿ ಪ್ರಧಾನಿ ವಾಜಪೇಯಿ ಇಹಲೋಕ ತ್ಯಜಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!