ನನವಜೋತ್ ಸಿಂಗ್ ಸಿಧು 
ದೇಶ

1999ರಲ್ಲಿ ಮಸೂದ್ ಅಝರ್ ನನ್ನು ಬಿಟ್ಟದ್ದು ಯಾರು: ಸಿಧು ಮತ್ತೆ ವಿವಾದ

ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಇತ್ತೀಚೆಗೆ ವಿವಾದಾತ್ಮಕವಾಗಿ ಪ್ರತಿಕ್ರಯಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನನವಜೋತ್ ಸಿಂಗ್....

ನವದೆಹಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಇತ್ತೀಚೆಗೆ ವಿವಾದಾತ್ಮಕವಾಗಿ ಪ್ರತಿಕ್ರಯಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನನವಜೋತ್ ಸಿಂಗ್ ಸಿಧು ಮತ್ತೆ ತಮ್ಮ "ಹೇಳಿಕೆ" ಮೂಲಕವೇ ಸುದ್ದಿಯಾಗಿದ್ದಾರೆ. 1999 ರ ಕಂದಹಾರ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಸಿಧು "ಜೆಇಎಂ ಮುಖ್ಯಸ್ಥ ಮಸೂದ್ ಅಝರ್ ನನ್ನು 1999ರಲ್ಲಿ ಬಿಡುಗಡೆಗೊಳಿಸಿದವರು ಯಾರು ಎಂದು ನಾನು ತಿಳಿಯಬಯಸುತ್ತೇನೆ" ಎಂದಿದ್ದಾರೆ.
"1999ರ ಕಂದಹಾರ್ ಘಟನೆಯಲ್ಲಿ ಯಾರು ಪಾಲ್ಗೊಂಡಿದ್ದಾರೆಂದು ನಾನು ಕೇಳಬಯಸುತ್ತೇನೆ, ನಮ್ಮ ಸೈನಿಕರ ಸಾವಿಗೆ ಯಾರು ಜವಾಬ್ದಾರರು?ನಮ್ಮ ಹೋರಾಟ ಉಗ್ರವಾದದ ವಿರುದ್ಧವಾಗಿದೆ.ಆದರೆ ಅದಕ್ಕೆ ಸೈನಿಕರೇಕೆ ಸಾಯಬೇಕು?ಇದಕ್ಕೇಕೆ ಶಾಶ್ವತ ಪರಿಹಾರ ಸಾಧ್ಯವಿಲ್ಲ? " ಅವರು ಕೇಳಿದ್ದಾರೆ.
ಇಂದು ವರದಿಗಾರರೊಂದಿಗೆ ಮಾತನಾಡಿದ ಸಿಧು ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
1999ರಲ್ಲಿ ಐಸಿ 814 ವಿಮಾನವನ್ನು ಅಪಹರಿಸಿದ ಉಗ್ರರು ಅದನ್ನು ಕಂದಹಾರ್ ಗೆ ತೆಗೆದುಕೊಂಡು ಹೋಗಿದ್ದರು.ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ಆಗ ಭಾರತದ ಜೈಲಿನಲ್ಲಿದ್ದ ಮೂವರು ಮೋಸ್ಟ್ ವಾಂಟೆಡ್ ಉಗ್ರರನ್ನು ಬಿಡುಗಡೆಗೊಳಿಸಿ ಅಪಹೃತ ವಿಮಾನದಲ್ಲಿದ್ದ 180 ಜನ ಪ್ರಯಾಣಿಕರು ಮತ್ತು ಸಿಬ್ಬಂದಿಯ ಜೀವ ರಕ್ಷಿಸಿತ್ತು. ಆ ವೇಳೆ ಬಿಡುಗಡೆಯಾಗಿದ್ದ ಉಗ್ರರ ಪೈಕಿ ಮೊನ್ನೆ ಗುರುವಾರ ಪುಲ್ವಾಮಾ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಸಂಘಟನೆ ನಾಯಕ ಮಸೂದ್ ಅಝರ್ ಸಹ ಒಬ್ಬನಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT