ಸಂಗ್ರಹ ಚಿತ್ರ 
ದೇಶ

ಸ್ಟೆರ್ಲೈಟ್ ಜತೆ ಪೊಲೀಸರು ಶಾಮಿಲು ಎಂದು ಆರೋಪಿಸಿದ್ದ ತಮಿಳುನಾಡು ಪರಿಸರವಾದಿ ನಾಪತ್ತೆ

ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧದ ಪ್ರತಿಭಟನೆ ವೇಳೆ 13 ಮಂದಿಯನ್ನು ಬಲಿ ಪಡೆದ ಗೋಲಿ ಬಾರ್ ನಲ್ಲಿ ಐಜಿ ಮತ್ತು ಡಿಐಜಿ ರ್ಯಾಂಕ್ ನ ಪೊಲೀಸ್ ಅಧಿಕಾರಿಗಳು...

ಚೆನ್ನೈ: ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧದ ಪ್ರತಿಭಟನೆ ವೇಳೆ 13 ಮಂದಿಯನ್ನು ಬಲಿ ಪಡೆದ ಗೋಲಿ ಬಾರ್ ನಲ್ಲಿ ಐಜಿ ಮತ್ತು ಡಿಐಜಿ ರ್ಯಾಂಕ್ ನ ಪೊಲೀಸ್ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದ ತಮಿಳುನಾಡು ಪರಿಸರವಾದಿ ಟಿ ಮುಗಿಲನ್, ಅವರ ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ.
ಈ ಸಂಬಂಧ ತಮಿಳುನಾಡು ವಿದ್ಯಾರ್ಥಿಗಳು ಮತ್ತು ಯುವ ಒಕ್ಕೂಟದ ಸಂಚಾಲಕ ಮಣಿ ಅವರು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದು, ಮುಗಿಲನ್ ಅವರು ಫೆಬ್ರವರಿ 15ರಿಂದ ನಾಪತ್ತೆಯಾಗಿದ್ದು, ಅವರನ್ನು ಕೊನೆ ಬಾರಿ ಎಗ್ಮೊರೆ ರೈಲ್ವೆ ನಿಲ್ದಾಣದಲ್ಲಿ ಪರಿಸರವಾದಿ ವಿಪಿ ಪೊನ್ನರಸನ್ ಹಾಗೂ ಇತರರು ನೋಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಮುಗಿಲನ್ ಅವರು ಮಹಲ್ ಎಕ್ಸ್ ಪ್ರೆಸ್ ನ ಸಾಮಾನ್ಯ ಬೋಗಿಯಲ್ಲಿ ಹತ್ತಿದರು. ಮಾರನೇ ದಿನ ನಾನು ಅವರಿಗೆ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ನಾನು ಕೂಡಲೇ ಸ್ಥಳೀಯ ಕಾರ್ಯಕರ್ತರಿಗೆ ತಿಳಿಸಿದೆ ಎಂದು ಪೊನ್ನರಸನ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣವನ್ನು ರೈಲ್ವೆ ಪೊಲೀಸರಿಗೆ ವರ್ಗಾಯಿಸಿದ್ದಾರೆ.
ಕಳೆದ ವರ್ಷ ಮೇ ತಿಂಗಳಲ್ಲಿ ತೂತುಕುಡಿಯಲ್ಲಿ ಐಜಿ ಮತ್ತು ಡಿಐಜಿ ಮಟ್ಟದ ಅಧಿಕಾರಿಗಳೇ ಗೋಲಿಬಾರ್ ಆಯೋಜಿಸಿದ್ದರು ಎಂದು ಮುಗಿಲನ್ ಅವರು ಆರೋಪಿಸಿರುವ ವಿಡಿಯೋ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಅವರು ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT