ಸಂಗ್ರಹ ಚಿತ್ರ 
ದೇಶ

ಸ್ಟೆರ್ಲೈಟ್ ಜತೆ ಪೊಲೀಸರು ಶಾಮಿಲು ಎಂದು ಆರೋಪಿಸಿದ್ದ ತಮಿಳುನಾಡು ಪರಿಸರವಾದಿ ನಾಪತ್ತೆ

ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧದ ಪ್ರತಿಭಟನೆ ವೇಳೆ 13 ಮಂದಿಯನ್ನು ಬಲಿ ಪಡೆದ ಗೋಲಿ ಬಾರ್ ನಲ್ಲಿ ಐಜಿ ಮತ್ತು ಡಿಐಜಿ ರ್ಯಾಂಕ್ ನ ಪೊಲೀಸ್ ಅಧಿಕಾರಿಗಳು...

ಚೆನ್ನೈ: ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧದ ಪ್ರತಿಭಟನೆ ವೇಳೆ 13 ಮಂದಿಯನ್ನು ಬಲಿ ಪಡೆದ ಗೋಲಿ ಬಾರ್ ನಲ್ಲಿ ಐಜಿ ಮತ್ತು ಡಿಐಜಿ ರ್ಯಾಂಕ್ ನ ಪೊಲೀಸ್ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದ ತಮಿಳುನಾಡು ಪರಿಸರವಾದಿ ಟಿ ಮುಗಿಲನ್, ಅವರ ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ.
ಈ ಸಂಬಂಧ ತಮಿಳುನಾಡು ವಿದ್ಯಾರ್ಥಿಗಳು ಮತ್ತು ಯುವ ಒಕ್ಕೂಟದ ಸಂಚಾಲಕ ಮಣಿ ಅವರು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದು, ಮುಗಿಲನ್ ಅವರು ಫೆಬ್ರವರಿ 15ರಿಂದ ನಾಪತ್ತೆಯಾಗಿದ್ದು, ಅವರನ್ನು ಕೊನೆ ಬಾರಿ ಎಗ್ಮೊರೆ ರೈಲ್ವೆ ನಿಲ್ದಾಣದಲ್ಲಿ ಪರಿಸರವಾದಿ ವಿಪಿ ಪೊನ್ನರಸನ್ ಹಾಗೂ ಇತರರು ನೋಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಮುಗಿಲನ್ ಅವರು ಮಹಲ್ ಎಕ್ಸ್ ಪ್ರೆಸ್ ನ ಸಾಮಾನ್ಯ ಬೋಗಿಯಲ್ಲಿ ಹತ್ತಿದರು. ಮಾರನೇ ದಿನ ನಾನು ಅವರಿಗೆ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ನಾನು ಕೂಡಲೇ ಸ್ಥಳೀಯ ಕಾರ್ಯಕರ್ತರಿಗೆ ತಿಳಿಸಿದೆ ಎಂದು ಪೊನ್ನರಸನ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣವನ್ನು ರೈಲ್ವೆ ಪೊಲೀಸರಿಗೆ ವರ್ಗಾಯಿಸಿದ್ದಾರೆ.
ಕಳೆದ ವರ್ಷ ಮೇ ತಿಂಗಳಲ್ಲಿ ತೂತುಕುಡಿಯಲ್ಲಿ ಐಜಿ ಮತ್ತು ಡಿಐಜಿ ಮಟ್ಟದ ಅಧಿಕಾರಿಗಳೇ ಗೋಲಿಬಾರ್ ಆಯೋಜಿಸಿದ್ದರು ಎಂದು ಮುಗಿಲನ್ ಅವರು ಆರೋಪಿಸಿರುವ ವಿಡಿಯೋ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಅವರು ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT