ರಾಹುಲ್ ಗಾಂಧಿ 
ದೇಶ

ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್

ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರ  ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ  ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಸರಗೋಡಿನ ಉತ್ತರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅಪರಿಚಿತರು ಹಲ್ಲೆ ನಡೆಸಿ  ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ಸದಸ್ಯರ ಹತ್ಯೆಯಿಂದ ಕೇರಳದಲ್ಲಿ ಆತಂಕ ಮನೆ ಮಾಡಿದ್ದು, ಪಕ್ಷ ಅವರ ಕುಟುಂಬ ಸದಸ್ಯರ ಪರವಾಗಿ ನಿಲ್ಲಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಕೊಲೆಗಳು ಕ್ಷಮಿಸಲಾಗದ ಆಕ್ಷಮ್ಯ ಅಪರಾಧವಾಗಿವೆ ಎಂದು  ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ  ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹಂತಕರನ್ನು ಶಿಕ್ಷೆಗೊಳಪಡಿಸುವವರೆಗೂ ಒತ್ತಾಯವನ್ನು ಕಾಂಗ್ರೆಸ್ ಪಕ್ಷ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT