ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಸರಗೋಡಿನ ಉತ್ತರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅಪರಿಚಿತರು ಹಲ್ಲೆ ನಡೆಸಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ಸದಸ್ಯರ ಹತ್ಯೆಯಿಂದ ಕೇರಳದಲ್ಲಿ ಆತಂಕ ಮನೆ ಮಾಡಿದ್ದು, ಪಕ್ಷ ಅವರ ಕುಟುಂಬ ಸದಸ್ಯರ ಪರವಾಗಿ ನಿಲ್ಲಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಕೊಲೆಗಳು ಕ್ಷಮಿಸಲಾಗದ ಆಕ್ಷಮ್ಯ ಅಪರಾಧವಾಗಿವೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹಂತಕರನ್ನು ಶಿಕ್ಷೆಗೊಳಪಡಿಸುವವರೆಗೂ ಒತ್ತಾಯವನ್ನು ಕಾಂಗ್ರೆಸ್ ಪಕ್ಷ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos