ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರಿಗಳ ಎಲ್ಲವನ್ನೂ ಬಹಿಷ್ಕರಿಸಿ: ಮೇಘಾಲಯ ರಾಜ್ಯಪಾಲರ ಶಾಕಿಂಗ್ ಹೇಳಿಕೆ

ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರಿಗಳ ಎಲ್ಲ ಸರಕು ಸಾಗಣೆಯನ್ನು ನಿರ್ಬಂಧಿಸುವಂತೆ ಹಾಗೂ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳದಂತೆ...

ಮೇಘಾಲಯ: ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ  ಕಾಶ್ಮೀರಿಗಳ ಎಲ್ಲ ಸರಕು ಸಾಗಣೆಯನ್ನು ನಿರ್ಬಂಧಿಸುವಂತೆ  ಹಾಗೂ  ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳದಂತೆ    ಮೇಘಾಲಯ ರಾಜ್ಯಪಾಲ ತಥಾಗತ ರಾಯ್ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

'ಕಾಶ್ಮೀರಿಗಳ ಎಲ್ಲವನ್ನೂ ಬಹಿಷ್ಕರಿಸಿ, ಕಾಶ್ಮೀರ  ಮಾರುಕಟ್ಟೆ ಅಥವಾ ವ್ಯಾಪಾರಿಗಳಿಂದ ಯಾವುದೇ ಸರಕುಗಳನ್ನು ಕೊಳ್ಳಬೇಡಿ, ಮುಂದಿನ ಎರಡು ವರ್ಷಗಳ ಕಾಲ ಕಾಶ್ಮೀರ , ಪವಿತ್ರ ಹಿಂದೂ ಕ್ಷೇತ್ರ ಅಮರನಾಥಕ್ಕೆ  ಹೋಗಬೇಡಿ ಎಂದು  ಅವರು ಟ್ವೀಟ್ ಸಂದೇಶದಲ್ಲಿ ಹೇಳಿದ್ದಾರೆ.

 ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಿಮ್ಮ ವಿದ್ಯುತ್ ಗಾಗಿ ನಮ್ಮ ನದಿ ನೀರನ್ನು ಬಳಸುವುದನ್ನು ಏಕೆ ನಿಲ್ಲಿಸುತ್ತಿಲ್ಲ ಎಂದು ಪ್ರಶ್ನಿಸಿದ್ದು,  ತಥಾಗತ ರಾಯ್ ಅಂತವರಿಗೆ ಕಾಶ್ಮೀರ ಬೇಕು ಆದರೆ, ಕಾಶ್ಮೀರಿಗಳು ಬೇಕಾಗಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT