ದೇಶ

ಅನಾರೋಗ್ಯದ ನೆಪವೊಡ್ಡಿ ಇಡಿ ವಿಚಾರಣೆಗೆ ರಾಬರ್ಟ್ ವಾದ್ರಾ'ಚಕ್ಕರ್'

Nagaraja AB

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಗಾಗಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ  ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ,  ಅನಾರೋಗ್ಯದ ನೆಪವೊಡ್ಡಿ ಚಕ್ಕರ್ ಹಾಕಿದ್ದಾರೆ.

ವಿದೇಶದಲ್ಲಿ ಅಕ್ರಮ ಆಸ್ತಿ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ  ತನಿಖೆಗಾಗಿ ರಾಬರ್ಟ್ ವಾದ್ರಾ  ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ವಾದ್ರಾ ಪರ ವಕೀಲರು ತನಿಖಾಧಿಕಾರಿಗಳಿಗೆ ಹೇಳಿದ್ದಾರೆ.
ನಾಳೆ ಅಥವಾ ವಾರಾಂತ್ಯದಲ್ಲಿ ಇಡಿ ಅಧಿಕಾರಿಗಳ ಮುಂದೆ ರಾಬರ್ಟ್ ವಾದ್ರಾ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಅವರು  ತಿಳಿಸಿದ್ದಾರೆ.
SCROLL FOR NEXT