ಮಾಯಾವತಿ 
ದೇಶ

ಬಿಜೆಪಿ ಸೋಲಿನ ಭಯದಿಂದ ಶಿವಸೇನೆ, ಎಐಎಡಿಎಂಕೆ ಜತೆ ಮೈತ್ರಿ: ಮಾಯಾವತಿ

ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ ಬದ್ಧವೈರಿಗಳಾಗಿದ್ದ ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಮಾಡಿಕೊಂಡ...

ಲಖನೌ: ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ ಬದ್ಧವೈರಿಗಳಾಗಿದ್ದ ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಮಾಡಿಕೊಂಡ ನಂತರ ಬಿಜೆಪಿ ಸೋಲಿನ ಭಯದಿಂದ ಶಿವಸೇನೆ ಹಾಗೂ ಎಐಎಡಿಎಂಕೆ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಬುಧವಾರ ಹೇಳಿದ್ದಾರೆ.
ಬಿಜೆಪಿ ಮಹಾರಾಷ್ಟ್ರ ಮತ್ತು ತಮಿಳುನಾಡು ನಂತರ ಈಗ ಬಿಹಾರದಲ್ಲೂ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿರುವುದು ಅವರ ಅಸಹಾಯಕತೆಯನ್ನು ತೋರಿಸುತ್ತಿದೆ ಮತ್ತು ಪ್ರಾದೇಶಿಕ ಪಕ್ಷಗಳ ಮುಂದೆ ಮಂಡಿಯೂರಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿಯಿಂದ ಬಿಜೆಪಿ ಆತಂಕಗೊಂಡಿದೆ. ಹೀಗಾಗಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಬಡವರ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಬಿಜೆಪಿಗೆ ದೇಶದ ಜನ ಮತ್ತೆ ಯಾವುದೇ ಕಾರಣಕ್ಕೂ ಅಧಿಕಾರ ನೀಡುವುದಿಲ್ಲ ಎಂದು ಬಿಎಸ್ ಪಿ ನಾಯಕಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT