ನವದೆಹಲಿ: ಬುಧವಾರ ಬೆಳಿಗ್ಗೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಭೂಕಂಪದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಜನರು ಭಯಭೀತರಾಗಿದ್ದಾರೆ.
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ ಅನುಭವವಾಗಿದ್ದು ಭೂಮಿಯ ೬ ಕಿಮೀ ಆಳದಲ್ಲಿ ಕಂಪನವಾಗಿರುವ ಕುರಿತು ಹವಾಮಾನ ಇಲಾಖೆ ಜಾಲತಾಣದಲ್ಲಿ ವರದಿ ಪ್ರಕಟಿಸಿದೆ.