ಸೀತಾರಾಮ್ ಯೆಚೂರಿ 
ದೇಶ

ಪುಲ್ವಾಮಾ ಉಗ್ರರ ದಾಳಿಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ; ಸೀತಾರಾಮ್ ಯೆಚೂರಿ

ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಸಿಪಿಎಂ ಪ್ರಧಾನ...

ಹೈದರಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ಚುನಾವಣೆಗಾಗಿ ಭಯೋತ್ಪಾದಕ ದಾಳಿಯನ್ನು ಬಳಸಿಕೊಳ್ಳುತ್ತಿರುವುದು ದೇಶದ ಭದ್ರತೆಯ ದೃಷ್ಟಿಯಿಂದ ತಪ್ಪು ಎಂದು ಹೇಳಿದ್ದಾರೆ.

ಎಎನ್ಐ ಸುದ್ದಿಸಂಸ್ಥೆಗೆ ಮಾತನಾಡಿದ ಅವರು, ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ. ಉಗ್ರರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ, ಏಕೆಂದರೆ ನಾವು ಯುಪಿಎ ಸರ್ಕಾರವಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗಳು ಪ್ರಶ್ನೆ ಹುಟ್ಟುಹಾಕುತ್ತವೆ. ಯಾವುದೇ ವಿಚಾರದಲ್ಲಿ ನಿಖರತೆ ಇರಬೇಕು. ಬಿಜೆಪಿ ಸರ್ಕಾರವೇ ಕಳೆದ 5 ವರ್ಷಗಳಿಂದ ಇದೆ, ಹಾಗಾದರೆ ಈ ಘಟನೆ ಹೇಗೆ ನಡೆಯಿತು.ಬಿಜೆಪಿಯವರು ಇದನ್ನು ರಾಜಕೀಯಗೊಳಿಸುತ್ತಿದ್ದು ಇದು ದೇಶಕ್ಕೆ ಮಾರಕ ಎಂದು ಆರೋಪಿಸಿದರು.

ನಿನ್ನೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಸೌದಿ ಯುವರಾಜನನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದನ್ನು ಪ್ರಶ್ನಿಸಿದ ಸೀತಾರಾಮ ಯೆಚೂರಿ, ಪ್ರಧಾನಿಯವರು ಈ ಹಿಂದೆ ಈ ರೀತಿ ವರ್ತಿಸಲಿಲ್ಲ. ಈ ಹಿಂದೆ ಹಲವು ದೇಶಗಳ ಅಧ್ಯಕ್ಷರು, ಪ್ರಧಾನ ಮಂತ್ರಿಗಳು ಭಾರತಕ್ಕೆ ಬಂದಿದ್ದಾಗ ಪ್ರಧಾನಿ ಮೋದಿಯವರು ಈ ರೀತಿ ಬರಮಾಡಿಕೊಂಡಿರಲಿಲ್ಲ. ಸೌದಿಯ ಯುವರಾಜರನ್ನು ಏಕೆ ಆ ರೀತಿ ಸ್ವೀಕರಿಸಿದರು ಎಂದು ಪ್ರಧಾನಿಯವರೇ ಉತ್ತರಿಸಬೇಕು. ಭಾರತಕ್ಕೆ ಬರುವ ಮೊದಲು ಸೌದಿ ಯುವರಾಜ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಗೆ ನೆರವನ್ನು ನೀಡಿದ್ದರು. ಇಬ್ಭಗೆ ನೀತಿ ಹೊಂದಿರುವವರನ್ನು ಒಪ್ಪಲು ಸಾಧ್ಯವೇ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT