ಸಂಗ್ರಹ ಚಿತ್ರ 
ದೇಶ

ಸೌದಿ ಜೈಲಿನಲ್ಲಿರುವ ಭಾರತ ಮೂಲದ 850 ಖೈದಿಗಳಿಗೆ ಬಿಡುಗಡೆ ಭಾಗ್ಯ!

ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ ಅವರ ಭಾರತ ಪ್ರವಾಸದಿಂದಾಗಿ ಸೌದಿಯಲ್ಲಿರುವ ಸುಮಾರು 850 ಖೈದಿಗಳಿಗೆ ಬಿಡುಗಡೆ ಭಾಗ್ಯ...

ನವದೆಹಲಿ: ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ ಅವರ ಭಾರತ ಪ್ರವಾಸದಿಂದಾಗಿ ಸೌದಿಯಲ್ಲಿರುವ ಸುಮಾರು 850 ಖೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ.
ಹೌದು. ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ ವಿವಿಧ ಪ್ರಕರಣಗಳಲ್ಲಿ ಸಿಲುಕಿ ತಮ್ಮ ದೇಶದ ವಿವಿಧ ಜೈಲುಗಳಲ್ಲಿರುವ ಭಾರತ ಮೂಲದ ಸುಮಾರು 850 ಖೈದಿಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. 
ದೆಹಲಿಯಲ್ಲಿ ನಿನ್ನೆ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್ ಹಾಗೂ ಅಧಿಕಾರಿಗಳ ಭೇಟಿ ಮಾಡಿದ ಬಳಿಕ ಸೌದಿ ದೊರೆ ಇಂತಹುದೊಂದು ಪ್ರಮುಖ ನಿರ್ಣಯ ಕೈಗೊಂಡಿದ್ದಾರೆ. ಇದೇ ವೇಳೆ ಭಾರತ ಪ್ರವಾಸ ಮಾಡಲಿಚ್ಛಿಸುವ ಸೌದಿ ಪ್ರಜೆಗಳಿಗೆ ಅನುಕೂಲವಾಗುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಇ ವೀಸಾ ವ್ಯವಸ್ಥೆ ಜಾರಿ ಮಾಡುವುದಾಗಿ ಭರವಸೆ ನೀಡಿದೆ. ಇದಕ್ಕೆ ಪ್ರತಿಯಾಗಿ ಸೌದಿ ಸರ್ಕಾರ ಕೂಡ ತಮ್ಮ ದೇಶಕ್ಕೆ ಕೆಲಸಕ್ಕಾಗಿ ಬಂದು ಸಂಕಷ್ಟ ಅನುಭವಿಸುತ್ತಿರುವ ಭಾರತ ಮೂಲದ ಪ್ರಜೆಗಳಿಗೆ ನೆರವು ನೀಡುವುದಾಗಿ ಹೇಳಿದೆ. 
ಇನ್ನು ಉಭಯ ದೇಶಗಳೂ ಇದೇ ಸಂದರ್ಭದಲ್ಲಿ ನಾನಾ ಒಪ್ಪಂದಗಳಿಗೆ ಸಹಿ ಹಾಕಿದ್ದು, ಈ ಪೈಕಿ ಸೋಲಾರ್ ಮಿತ್ರ ಕೂಟಕ್ಕೆ ಸೌದಿ ಸೇರ್ಪಡೆಯಾಗಿದ್ದು, ಇದು ಮಾತ್ರವಲ್ಲದೇ ನವೀಕರಿಸಬಹುದಾದ ಇಂಧನ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಹೂಡಿಕೆ ಮಾಡುವ ಕುರಿತು ಉಭಯ ದೇಶಗಳ ನಾಯಕರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT