ಮುಲಾಯಂ ಸಿಂಗ್ ಯಾದವ್-ಅಖಿಲೇಶ್ ಯಾದವ್-ಮಾಯಾವತಿ (ಸಂಗ್ರಹ ಚಿತ್ರ) 
ದೇಶ

ಬಿಎಸ್ ಪಿ-ಎಸ್ ಪಿ ಮೈತ್ರಿಗೆ ಮುಲಾಯಂ ಕಿಡಿ: ರಹಸ್ಯ ಪತ್ರ ಕಳಿಸಲು ಟಿಕೆಟ್ ಆಕಾಂಕ್ಷಿಗಳಿಗೆ ಕರೆ

ಬಹುಜನ ಸಮಾಜವಾದಿ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ, ಪುತ್ರ ಅಖಿಲೇಶ್ ಯಾದವ್ ವಿರುದ್ಧ...

ಲಖನೌ: ಲೋಕಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷವು ಉತ್ತರಪ್ರದೇಶದಲ್ಲಿ ಬಿರುಸಿನ ಚಟುವಟಿಕೆಯಲ್ಲಿ ತೊಡಗಿರುವಾಗ, ಬಹುಜನ ಸಮಾಜವಾದಿ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ, ಪುತ್ರ ಅಖಿಲೇಶ್ ಯಾದವ್ ವಿರುದ್ಧ ಮುಲಾಯಂ ಸಿಂಗ್ ಯಾದವ್ ಹರಿಹಾಯ್ದಿದ್ದಾರೆ.
“ರಾಜ್ಯದ 80 ಲೋಕಸಭಾ ಸ್ಥಾನಗಳಲ್ಲಿ ಕೇವಲ 40ರಲ್ಲಿ ಮಾತ್ರ ಎಸ್‍ಪಿ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿದ್ದಾರೆ.  ಅಲ್ಲದೆ ಇನ್ನೂ ಅಭ್ಯರ್ಥಿಗಳ ಪಟ್ಟಿ ಇತ್ಯರ್ಥವಾಗಿಲ್ಲ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದೆ” ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಮ್ಮ ನಾಯಕತ್ವದಲ್ಲಿ ಸಮಾಜವಾದಿ ಪಕ್ಷ 39 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.  ನಂತರದ ಉಪ ಚುನಾವಣೆಯಲ್ಲಿ 3 ಸ್ಥಾನ ಲಭಿಸಿತ್ತು. ಇದೀಗ ಬಿಎಸ್‍ಪಿ ಮೈತ್ರಿಯಿಂದಾಗಿ ಚುನಾವಣೆಗೂ ಮುನ್ನವೇ ಒಟ್ಟು ಕ್ಷೇತ್ರಗಳಲ್ಲಿನ ಅರ್ಧ ಸ್ಥಾನಗಳು ಕೈತಪ್ಪಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಬಿಜೆಪಿಯನ್ನು ಮಣಿಸಿ ಬಹುಮತದ ಗೆಲುವು ಸಾಧಿಸಲು ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಿದ್ಧರಾಗಬೇಕು. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಖಚಿತ.  ಒಂದು ವೇಳೆ ಯಾವುದೇ ಅನುಮಾನವಿದ್ದಲ್ಲಿ. ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯಿದ್ದಲ್ಲಿ ರಹಸ್ಯ ಪತ್ರ ರವಾನಿಸಬಹುದು”ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೂ ಪ್ರಧಾನಿಯಾಗಲೆಂದು ಹಾರೈಸಿರುವ ಮುಲಾಯಂ, ಸಮಾಜವಾದಿ ಪಕ್ಷದ ವರಿಷ್ಠನಾಗಿದ್ದರೂ ತಮಗೆ ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 
“ದುರಾದೃಷ್ಟವಶಾತ್ ಪಕ್ಷದಿಂದ ನನಗೆ ಯಾವುದೇ ಹೊಣೆಗಾರಿಕೆ ನೀಡಿಲ್ಲ. ಆದಾಗ್ಯೂ  ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಹುದಾದ ಎಲ್ಲ ಅಧಿಕಾರವನ್ನೂ ಹೊಂದಿರುವೆ” ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT