ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ! 
ದೇಶ

ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ!

ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.

ನವದೆಹಲಿ: ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.
ಸುಪ್ರೀಂ ಕೋರ್ಟ್ ಗೆ ರಾಜ್ಯಗಳು ಸಲ್ಲಿಸಿದ್ದ ಅಫಿಡವಿಟ್ ನ ವಿಚಾರಣೆ ನಡೆಸಿದ ನ್ಯಾಯಾಲಯ  ಸುಮಾರು 11,72,931 ಪರಿಶಿಷ್ಟ ಪಂಗಡ, ಇತರೆ ಬುಡಕಟ್ಟು ಅರಣ್ಯ ನಿವಾಸಿಗಳ  ಭೂ ಮಾಲೀಕತ್ವ ಹಕ್ಕುಗಳನ್ನು ತಿರಸ್ಕರಿಸಿದೆ.
ಅರಣ್ಯ ಹಕ್ಕು ಕಾಯ್ದೆಯ ಅನುಸಾರ 31 ಡಿಸೆಂಬರ್ 2005ಕ್ಕಿಂತ ಮುನ್ನ  ಕನಿಷ್ಠ ಮೂರು ತಲೆಮಾರುಗಳಿಂದ ಕಾಡಿನಲ್ಲಿ ವಾಸವಿರುವವರು ಮಾತ್ರವೇ ಭೂಮಿ ಹಕ್ಕುಗಳಿಗೆ ಅರ್ಹರಾಗಿದ್ದಾರೆ.
ಶುಕ್ರವಾರ ನೀಡಿದ ಆದೇಶದಲ್ಲಿ ನ್ಯಾಯಾಲಯವು  17 ರಾಜ್ಯ ಸರ್ಕಾರಗಳಿಗೆ ಬರುವ ಜುಲೈ 12ರೊಳಗೆ ತಮ್ಮ ವ್ಯಾಪ್ತಿಯಲ್ಲಿನ ಅರಣ್ಯದಲ್ಲಿ ವಾಸವಿರುವ ಆದಿವಾಸಿ, ಬುಡಕಟ್ಟು ಸಮುದಾಯದವರನ್ನು ತೆರವುಗೊಳಿಸುವ ಪ್ರಕ್ರಿಯೆ ಮುಕ್ತಾಯಗೊಳಿಸಲು ಹೇಳಿದೆ. ಅಲ್ಲದೆ ಒಮ್ಮೆ ಹೀಗೆ ಅವರನ್ನು ಒಕ್ಕಲೆಬ್ಬಿಸಿದ ನಂತರ ಒಂದು ಉಪಗ್ರಹದಾಧಾರಿತ ಚಿತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಫಾರೆಸ್ಟ್ ಸರ್ವೆ ಆಫ್ ಇಂಡಿಯಾಗೆ ಕೋರ್ಟ್ ನಿರ್ದೇಶಿಸಿದೆ.
ಗಮನಾರ್ಹ ಸಂಗತಿ ಎಂದರೆ ಒಟ್ಟು 17 ರಾಜ್ಯಗಳ ಪೈಕಿಶೇ. 20 ಅರಣ್ಯ ವಾಸಿಗಳು ಮಧ್ಯ ಪ್ರದೇಶ, ಕರ್ನಾಟಕಮತ್ತು ಒಡಿಶಾ ರಾಜ್ಯಗಳಲ್ಲಿದ್ದಾರೆ.  ಇವರು ತಾವು ವಾಸಿಸುವ ಭೂಮಿಯ ಹಕ್ಕು ತಮಗೆ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT