ಬೆಂಕಿಗಾಹುತಿಯಾದ ಕಾರುಗಳು 
ದೇಶ

ಏರೋ ಇಂಡಿಯಾ ಅಗ್ನಿ ಪ್ರಮಾದ: ಕಾರು ಮಾಲೀಕರಿಗೆ ಪರಿಹಾರ ನೀಡಲು ಸಿದ್ಧ ಎಂದ ವಿಮಾ ಕಂಪನಿಗಳು!

ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ್ದ ಅಗ್ನಿ ಪ್ರಮಾದದಲ್ಲಿ ಸುಟ್ಟು ಕರಕಲಾದ ಕಾರುಗಳಿಗೆ ವಿಮೆ ನೀಡಲು ತಾವು ಸಿದ್ಧ ಎಂದು ವಿಮಾ ಕಂಪನಿಗಳು ಮುಂದೆ ಬಂದಿವೆ.

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ್ದ ಅಗ್ನಿ ಪ್ರಮಾದದಲ್ಲಿ ಸುಟ್ಟು ಕರಕಲಾದ ಕಾರುಗಳಿಗೆ ವಿಮೆ ನೀಡಲು ತಾವು ಸಿದ್ಧ ಎಂದು ವಿಮಾ ಕಂಪನಿಗಳು ಮುಂದೆ ಬಂದಿವೆ.
ವಾರಾಂತ್ಯ ವಾದ್ದರಿಂದ ಇಂದು ವೈಮಾನಿಕ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷರು ಆಗಮಿಸಿದ್ದರು. ಅಂತೆಯೇ ಪಾರ್ಕಿಂಗ್ ಲಾಟ್ ನಲ್ಲೂ 500ಕ್ಕೂ ಹೆಚ್ಚು ವಾಹನಗಳು ಆಗಮಿಸಿದ್ದವು. ಈ ವೇಳೆ ಸುಮಾರು 300ಕ್ಕೂ ಅಧಿಕ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದು. ಸುಮಾರು 272 ಕಾರುಗಳು ಬೆಂಕಿಗಾಹುತಿಯಾಗಿವೆ. ಬಯಲು ಪ್ರದೇಶದಲ್ಲಿನ ಹುಲ್ಲಿಗೆ ಬೆಂಕಿ ತಗುಲಿ ನಿಲ್ಲಿಸಿದ್ದ ಕಾರುಗಳಿಗೆ ಹತ್ತಿಕೊಂಡಿದೆ. ಇದರ ಪರಿಣಾಮ ದುಬಾರಿ ಬೆಲೆಯ ಕಾರುಗಳು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಇನ್ನು ಅಗ್ನಿ ದುರಂತದ ಮಾಹಿತಿ ತಿಳಿದ ಬೆನ್ನಲ್ಲೇ ವಿವಿಧ ವಿಮಾ ಕಂಪನಿಗಳಿಗೆ ಕಾರು ಮಾಲೀಕರು ದೂರು ನೀಡಿದ್ದು, ಈ ಸಂಬಂಧ ಸ್ಥಳಕ್ಕಾಗಮಿಸಿದ ವಿಮಾ ಕಂಪನಿಗಳ ಸಿಬ್ಬಂದಿ ಸ್ಥಳ ಮಹಜರು ಮಾಡಿದ್ದಾರೆ. ಅಂತೆಯೇ ಕಾರು ಮಾಲೀಕರಿಗೆ ವಿಮೆ ನೀಡುವ ಕುರಿತು ಆಶ್ವಾಸನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ಕಾರುಗಳ ವಿಮೆಯನ್ನು ಪರಿಶೀಲಿಸಿ ಅವಧಿಯಾಧಾರದ ಮೇಲೆ ವಿಮೆ ನೀಡಲಾಗುತ್ತದೆ. ಸಂಪೂರ್ಣ ಬೆಂಕಿಗಾಹುತಿಯಾದ ಕಾರುಗಳಿಗೆ ಗರಿಷ್ಟ ಶೇ.90ರಷ್ಟು ವಿಮೆ ಪರಿಹಾರ ಮತ್ತು ವಿಶೇಷ ಪ್ರಕರಣಗಳಲ್ಲಿ ಕಾರಿನ ಬದಲಿಗೆ ಹೊಸ ಕಾರು ನೀಡುವ ಸಾಧ್ಯತೆ ಕೂಡ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT