ಸಂಗ್ರಹ ಚಿತ್ರ 
ದೇಶ

ಕಣ್ಣು ಬಿಟ್ಟರೆ ದೆಹಲಿಯಲ್ಲಿ ಸಾವಿರ ಸಮಸ್ಯೆ ಕಾಣುತ್ತವೆ: ಸಿಎಂ ಕೇಜ್ರಿವಾಲ್ ಧರಣಿಗೆ ಗಂಭೀರ್ ಟಾಂಗ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಯಾಗಿ ಕಣ್ಣು ಹಾರಿಸಿದರೆ ಕನಿಷ್ಠ ಸಾವಿರ ಸಮಸ್ಯೆ ಕಾಣುತ್ತದೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಇಂದು ಬೀದಿಗಿಳಿದಿದೆ ಎಂದು ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಿಯಾಗಿ ಕಣ್ಣು ಹಾರಿಸಿದರೆ ಕನಿಷ್ಠ ಸಾವಿರ ಸಮಸ್ಯೆ ಕಾಣುತ್ತದೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಇಂದು ಬೀದಿಗಿಳಿದಿದೆ ಎಂದು ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.
ದೆಹಲಿಗೆ ಸಂಪೂರ್ಣ ರಾಜ್ಯ ನೀಡಬೇಕು ಎಂದು ಆಗ್ರಹಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವಂತೆಯೇ, ತಮ್ಮದೇ ರಾಜ್ಯದ ಸಿಎಂ ವಿರುದ್ಧ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಂಭೀರ್, ದೆಹಲಿಯಲ್ಲಿ 2 ಕೋಟಿ ಜನಸಂಖ್ಯೆ, ಸಾವಿರಾರು ಸಮಸ್ಯೆಗಳಿವೆ. ಆದರೆ ಪರಿಹಾರವೇನು.. ಮತ್ತೋರ್ವ ಸಿಎಂ ಕೇಜ್ರಿವಾಲ್ ಧರಣಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಹೇಳಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಮಾರ್ಚ್ 1 ರಿಂದ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT