ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ 
ದೇಶ

ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ

40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ

ಲಾಹೋರ್: 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ ಸಂಪೂರ್ಣ ಉಲ್ಟಾ ಹೊಡೆದಿದೆ.
ಬಹಾವಲ್​ಪುರ್​ದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ವಶಕ್ಕೆ ಪಡೆದಿದೆ ಎಂದು ಪಾಕಿಸ್ತಾನ ಮಾಹಿತಿ ಸಚಿವ ಫವದ್ ಚೌಧರಿ ಅವರು ಹೇಳಿದ್ದರು. ಆದರೆ ಈಗ ಅದೇ ಸಚಿವ ಉಲ್ಟಾ ಹೊಡೆದಿದ್ದು, ನಾವು ವಶಕ್ಕೆ ಪಡೆದಿದ್ದು ಮದರಸಾವನ್ನು ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಭಾರತದ ವಿರುದ್ಧವೇ ಆರೋಪ ಮಾಡಿದ್ದಾರೆ. 
ಬಹಾವಲ್​ಪುರ್​ದಲ್ಲಿರುವ ಮದ್ರೆಸ್ಸಾತುಲ್ ಸಬೀರ್ ಮತ್ತು ಜಾಮಾ ಮಸ್ಜಿದ್ ಸುಭಾನಲ್ಲಾ ಸಂಸ್ಥೆಗಳನ್ನು ರಾಷ್ಟ್ರೀಯ ಕಾರ್ಯಸೂಚಿ ಯೋಜನೆಯಡಿಯಲ್ಲಿ ವಶಕ್ಕೆ ಪಡೆದುಕೊಳ್ಳಲು ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಮದರಸಾವನ್ನು ವಶಕ್ಕೆ ಪಡೆದಿದ್ದೇವೆ, ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಪಾಕ್ ಸಚಿವ ಚೌಧರಿ ಆರೋಪಿಸಿದ್ದಾರೆ. 
ಆದರೆ ಫೆ.22 ರಂದು ವಶಕ್ಕೆ ಪಡೆದು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ಜೈಶ್-ಇ-ಮೊಹಮ್ಮದ್ ನ ಉಗ್ರ ಸಂಘಟನೆಯ ಕಚೇರಿಯನ್ನು ಎಂದು ಪಾಕಿಸ್ತಾನದ ಸರ್ಕಾರವೇ ಅಧಿಕೃತವಾಗಿ ಹೇಳಿಕೊಂಡಿತ್ತು. ಈಗ ಮತ್ತೆ ಉಲ್ಟಾ ಹೊಡೆದಿದ್ದು ತಾನು ವಶಕ್ಕೆ ಪಡೆದಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಕಚೇರಿಯನ್ನಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT