ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ 
ದೇಶ

ಜೈಶ್-ಇ-ಮೊಹಮ್ಮದ್ ಕಚೇರಿ ವಶಕ್ಕೆ: ಒಂದೇ ದಿನದಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ

40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ

ಲಾಹೋರ್: 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ ಸಂಪೂರ್ಣ ಉಲ್ಟಾ ಹೊಡೆದಿದೆ.
ಬಹಾವಲ್​ಪುರ್​ದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ವಶಕ್ಕೆ ಪಡೆದಿದೆ ಎಂದು ಪಾಕಿಸ್ತಾನ ಮಾಹಿತಿ ಸಚಿವ ಫವದ್ ಚೌಧರಿ ಅವರು ಹೇಳಿದ್ದರು. ಆದರೆ ಈಗ ಅದೇ ಸಚಿವ ಉಲ್ಟಾ ಹೊಡೆದಿದ್ದು, ನಾವು ವಶಕ್ಕೆ ಪಡೆದಿದ್ದು ಮದರಸಾವನ್ನು ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಭಾರತದ ವಿರುದ್ಧವೇ ಆರೋಪ ಮಾಡಿದ್ದಾರೆ. 
ಬಹಾವಲ್​ಪುರ್​ದಲ್ಲಿರುವ ಮದ್ರೆಸ್ಸಾತುಲ್ ಸಬೀರ್ ಮತ್ತು ಜಾಮಾ ಮಸ್ಜಿದ್ ಸುಭಾನಲ್ಲಾ ಸಂಸ್ಥೆಗಳನ್ನು ರಾಷ್ಟ್ರೀಯ ಕಾರ್ಯಸೂಚಿ ಯೋಜನೆಯಡಿಯಲ್ಲಿ ವಶಕ್ಕೆ ಪಡೆದುಕೊಳ್ಳಲು ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಮದರಸಾವನ್ನು ವಶಕ್ಕೆ ಪಡೆದಿದ್ದೇವೆ, ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ ಕಚೇರಿ ಎಂದು ಪ್ರಚಾರ ಮಾಡುತ್ತಿದೆ ಎಂದು ಪಾಕ್ ಸಚಿವ ಚೌಧರಿ ಆರೋಪಿಸಿದ್ದಾರೆ. 
ಆದರೆ ಫೆ.22 ರಂದು ವಶಕ್ಕೆ ಪಡೆದು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದು, ಜೈಶ್-ಇ-ಮೊಹಮ್ಮದ್ ನ ಉಗ್ರ ಸಂಘಟನೆಯ ಕಚೇರಿಯನ್ನು ಎಂದು ಪಾಕಿಸ್ತಾನದ ಸರ್ಕಾರವೇ ಅಧಿಕೃತವಾಗಿ ಹೇಳಿಕೊಂಡಿತ್ತು. ಈಗ ಮತ್ತೆ ಉಲ್ಟಾ ಹೊಡೆದಿದ್ದು ತಾನು ವಶಕ್ಕೆ ಪಡೆದಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಕಚೇರಿಯನ್ನಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT