ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ, ಗಂಗಾರತಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
Nagaraja AB
ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭ ಮೇಳಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗಂಗಾರತಿ ವಿಶೇಷ ಪೂಜೆ ಸಲ್ಲಿಸಿದರು.ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ, ಭಾವಭಕ್ತಿಯೊಂದಿಗೆ ಗಂಗಾರತಿ ಪೂಜೆ ಮಾಡಿದರು.
ನಂತರ, ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಸಚಿವಾಲಯ ಆಯೋಜಿಸಿದ್ದ ಸ್ವಚ್ಛ ಕುಂಭ ಸ್ವಚ್ಛ ಅಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೋದಿ, ಸಪಾಯಿ ಕರ್ಮಾಚಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ನಾವಿಕರಿಗೆ ಸ್ವಚ್ಛ ಕುಂಭ ಸ್ವಚ್ಛ ಅಭಾರ್ ಪ್ರಶಸ್ತಿ ಪ್ರಧಾನ ಮಾಡಿದರು.