ಸಂಗ್ರಹ ಚಿತ್ರ 
ದೇಶ

ರೈತರೇ ಚಿಂತೆ ಬೇಡ, 2019ಕ್ಕೆ ಭಾರತಕ್ಕೆ ಮುಂಗಾರು ಮಳೆ ಕೊರತೆ ಇಲ್ಲ: ಸ್ಕೈಮೆಟ್ ವರದಿ

2019ರಲ್ಲಿ ಮುಂಗಾರುಮಳೆ ಚುರುಕಾಗಿರಲಿದ್ದು, ಈ ಬಾರಿ ದೇಶಾದ್ಯಂತ ಭಾಗಶಃ ಮಳೆ ಕೊರತೆ ಇರುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ವರದಿ ಹೇಳಿದೆ.

ನವದೆಹಲಿ: 2019ರಲ್ಲಿ ಮುಂಗಾರುಮಳೆ ಚುರುಕಾಗಿರಲಿದ್ದು, ಈ ಬಾರಿ ದೇಶಾದ್ಯಂತ ಭಾಗಶಃ ಮಳೆ ಕೊರತೆ ಇರುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ವರದಿ ಹೇಳಿದೆ.
ಈ ಬಗ್ಗೆ ಹವಾಮಾನ ವರದಿ ಸಂಸ್ಥೆ ಸ್ಕೈಮೆಟ್ ವರದಿ ಬಿಡುಗಡೆ ಮಾಡಿದ್ದು, ಈ ವರ್ಷ ಭಾರತದಲ್ಲಿ ಮುಂಗಾರು ಮಳೆ ಸಾಧಾರಣವಾಗಿ ಇರುವ ಸಾಧ್ಯತೆ ಇದೆ ಎಂದು ಹೇಳಿದೆ. ದೇಶದ ಏಕೈಕ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್, 'ರೈತರು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯ ನಿರೀಕ್ಷೆ ಇದೆ. ಈ ಮೂಲಕ ಈ ವರ್ಷ ಬೆಳೆ ಉತ್ತಮವಾಗಿರಲಿದ್ದು, ದೇಶದ ಆರ್ಥಿಕ ಬೆಳವಣಿಗೆ ಹೆಚ್ಚಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.
ಅಂತೆಯೇ ಈ ವರ್ಷ ಕೃಷಿ ಆದಾಯ ಮತ್ತು ಬೆಳವಣಿದೆ ಸುಮಾರು 2 ಟ್ರಿಲಿಯನ್ ಬಿಲಿಯನ್ ಡಾಲರ್ ಗೆ ಹೆಚ್ಚಳವಾಗಲಿದೆ ಎಂದೂ ಸ್ಕೈಮೆಟ್ ವರದಿಯಲ್ಲಿ ತಿಳಿಸಿದ್ದು, ಶೇ.50ಕ್ಕಿಂತ ಹೆಚ್ಚು ಭಾರತದಾದ್ಯಂತ ಸಾಧಾರಣ ಉತ್ತಮ ಮಳೆಯಾಗಲಿದೆ. ಈ ಬಾರಿ ಕಳೆದ ವರ್ಷದಂತ ಅತೀವೃಷ್ಟಿಯ ಸಾಧ್ಯತೆ ಕಡಿಮೆ ಎಂದೂ ವರದಿಯಲ್ಲಿ ಹೇಳಲಾಗಿದ್ದು, ಒಟ್ಟಾರೆ 4 ತಿಂಗಳ ಅವಧಿಯಲ್ಲಿ 89ಸಿಎಂ ಮಳೆಯಾಗುವ ನಿರೀಕ್ಷೆ ಇದೆ ಎಂದು ಸ್ಕೈಮೆಟ್ ಸಿಇಒ ಜತಿನ್ ಸಿಂಗ್ ಹೇಳಿದ್ದಾರೆ.
ಅಂತೆಯೇ ಈ ಬಾರಿ ಶೇ.96 ರಿಂದ ಶೇ.104ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಮಾನ್ಸೂನ್ ತಿಂಗಳ ಅವಧಿಯಲ್ಲಿ ಶೇ.70ರಷ್ಟು ಮಳೆ ನಿರೀಕ್ಷಿಸಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT