ಮಾಯಾವತಿ, ಅಖಿಲೇಶ್ ಯಾದವ್ 
ದೇಶ

ಉತ್ತರ ಖಂಡ್, ಮಧ್ಯಪ್ರದೇಶದಲ್ಲೂ ಬಿಎಸ್ಪಿ- ಎಸ್ಪಿ ಮೈತ್ರಿ ವಿಸ್ತರಣೆ

ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರ ಪ್ರದೇಶದಲ್ಲಿ ಮಹಾಘಟಬಂದನ್ ನಿಂದ ಹೊರಗುಳಿದು ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳು, ಉತ್ತರ ಖಂಡ್ ಹಾಗೂ ಮಧ್ಯಪ್ರದೇಶದಲ್ಲೂ ಮೈತ್ರಿ ವಿಸ್ತರಿಸಿಕೊಂಡಿವೆ.

ಲಖನೌ:  ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರ ಪ್ರದೇಶದಲ್ಲಿ  ಮಹಾಘಟಬಂದನ್ ನಿಂದ  ಹೊರಗುಳಿದು ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳು, ಉತ್ತರ ಖಂಡ್ ಹಾಗೂ ಮಧ್ಯಪ್ರದೇಶದಲ್ಲೂ ಮೈತ್ರಿ ವಿಸ್ತರಿಸಿಕೊಂಡಿವೆ.

ಮಧ್ಯಪ್ರದೇಶದ 29 ಕ್ಷೇತ್ರಗಳ ಪೈಕಿ ಬಾಲ್ಗಟ್, ಟಿಕಮ್ ಘಡ, ಖಜುರಾಹೋದಲ್ಲಿನ ಮೂರು ಕ್ಷೇತ್ರಗಳಲ್ಲಿ ಮಾತ್ರ ಎಸ್ಪಿ ಸ್ಪರ್ಧಿಸಲಿದ್ದು, ಉಳಿದ 26 ಸ್ಥಾನಗಳಲ್ಲಿ ಬಿಎಸ್ಪಿ ಪಕ್ಷ ಸ್ಪರ್ಧಿಸಲಿದೆ.

ಉತ್ತರ ಖಂಡ್ ನಲ್ಲೂ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹಾಗೂ ಎಸ್ಪಿಯ ಮುಖ್ಯಸ್ಥ ಅಖಿಲೇಶ್  ಯಾದವ್ ಮೈತ್ರಿ ಮಾಡಿಕೊಂಡಿದ್ದಾರೆ. ಉತ್ತರ್ ಖಂಡ್ ನ ಗರ್ವಾಲಾ ಕ್ಷೇತ್ರದಲ್ಲಿ ಮಾತ್ರ ಎಸ್ಪಿ ಸ್ಪರ್ಧಿಸಲಿದ್ದು, ಉಳಿದ ನಾಲ್ಕು  ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸಲಿದೆ

ಉತ್ತರ ಪ್ರದೇಶದಲ್ಲಿ ಬಿಎಸ್ಪಿ 38, ಎಸ್ಪಿ 37, 2 ಕಾಂಗ್ರೆಸ್  ಸೇರಿದಂತೆ ಇತರ ಪಕ್ಷಗಳು 5 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮಾಯಾವತಿ ಹಾಗೂ ಅಖಿಲೇಶ್ ಯಾದವ್ ಮೈತ್ರಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT